alex Certify ಸಂಕಷ್ಟದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ ನೀಡಿದ ಮೋದಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕಷ್ಟದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ ನೀಡಿದ ಮೋದಿ ಸರ್ಕಾರ

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಸರ್ಕಾರ ರೈತರಿಗೆ ದೊಡ್ಡ ಉಡುಗೊರೆಯನ್ನು ನೀಡಿದೆ. ಲಾಕ್‌ಡೌನ್‌ನಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರು ಇದನ್ನು ಮನೆಯ ಅಗತ್ಯ ವಸ್ತುಗಳ ಖರೀದಿಗೆ ಬಳಸಬಹುದು ಎಂದು ಸರ್ಕಾರ ಹೇಳಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್‌ನಲ್ಲಿ ತೆಗೆದುಕೊಂಡ ಸಾಲದ ಶೇಕಡಾ 10 ರಷ್ಟು ಹಣವನ್ನು ಗೃಹ ಖರ್ಚಿಗೆ ಬಳಸಲು ರಿಸರ್ವ್ ಬ್ಯಾಂಕ್   ಅನುಮತಿ ನೀಡಿದೆ. ಆರ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್‌ನಲ್ಲಿ ಪ್ರಸ್ತುತ 1.60 ಲಕ್ಷ ರೂಪಾಯಿಗಳ ಸಾಲವನ್ನು ಯಾವುದೇ ಗ್ಯಾರಂಟಿ ಇಲ್ಲದೆ ನೀಡಲಾಗುತ್ತಿದೆ.

ಇದಲ್ಲದೆ 3 ಲಕ್ಷ ರೂಪಾಯಿಗಳವರೆಗೆ ಸಾಲಗಳು ಗ್ಯಾರಂಟಿಯೊಂದಿಗೆ ಲಭ್ಯವಿದೆ. ಕಿಸಾನ್ ಕ್ರೆಡಿಟ್ ಕಾರ್ಡ್‌ನಲ್ಲಿ ತೆಗೆದುಕೊಂಡ ಸಾಲಗಳಿಗೆ ಬ್ಯಾಂಕುಗಳು ಶೇಕಡಾ 4ರಷ್ಟು ವಾರ್ಷಿಕ ಬಡ್ಡಿಯನ್ನು ವಿಧಿಸುತ್ತವೆ. ಆದರೆ ಸಮಯಕ್ಕೆ ಪಾವತಿಸಿದ್ರೆ ಬಡ್ಡಿಯಲ್ಲಿ ಶೇಕಡಾ 1ರಷ್ಟು ರಿಯಾಯಿತಿ ಸಿಗಲಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಡೆಬಿಟ್ ಕಾರ್ಡ್ ಸಹ ನೀಡಲಾಗುತ್ತದೆ. ಅದರ ಮೂಲಕ ಅವರು ತಮ್ಮ ಕೆಸಿಸಿ ಖಾತೆಯಿಂದ ಹಣವನ್ನು ಹಿಂಪಡೆಯಬಹುದು. https://pmkisan.gov.in/ ನಲ್ಲಿ ಇದಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿ ಲಭ್ಯವಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...