alex Certify ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದ್ದು ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಭಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಸಂಪುಟದ ಅನುಮೋದನೆ ಪಡೆದು ಕಡತ ಕಳಿಸುವಂತೆ ಸೂಚಿಸಲಾಗಿದೆ.

ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರದಿಂದ ಎಪಿಎಂಸಿ ಬಂದ್ ಮಾಡುತ್ತೇವೆ ಎಂದು ಎಪಿಎಂಸಿ ಸಂಯೋಜಕ ರಮೇಶ್ ಚಂದ್ರ ಹೇಳಿಕೆ ನೀಡಿದ್ದಾರೆ.

ಎಪಿಎಂಸಿ ವ್ಯಾಪಾರಿ ಸಂಘದ ಸಂಯೋಜಕರಾಗಿರುವ ರಮೇಶ್ ಚಂದ್ರ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಎಪಿಎಂಸಿಗಳನ್ನು ಸೋಮವಾರದಿಂದ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ. ರಾಜ್ಯಪಾಲರು ರಾಜ್ಯಪಾಲರು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಕಳುಹಿಸುವಂತೆ ಕಡತವನ್ನು ವಾಪಸ್ ಕಳುಹಿಸಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಲವೆಡೆ ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡಬಾರದೆಂದು ಒತ್ತಾಯಿಸಿ ರೈತ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಿಂದ ಮನವಿ ಸಲ್ಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...