ಬೆಂಗಳೂರು: ಜೂನ್ 1 ರಿಂದ ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಪುನಾರಂಭಿಸಲು ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿವೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಸರ್ಕಾರ ಅನುಮತಿ ನೀಡಬಹುದು ಎಂದು ಹೇಳಲಾಗಿದೆ.
ಕಳೆದ ಎರಡು ತಿಂಗಳಿಗೂ ಅಧಿಕ ಸಮಯದಿಂದ ಹೋಟೆಲ್ಗಳು ಬಾಗಿಲು ಹಾಕಿವೆ. ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಹೋಟೆಲ್ಗಳನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಲಾಕ್ ಡೌನ್ ಬಳಿಕ ಆದಾಯವಿಲ್ಲದೆ ಅತಂತ್ರವಾಗಿರುವ ಕಾರ್ಮಿಕರ ಅನುಕೂಲಕ್ಕಾಗಿ ಜೂನ್ 1 ರಿಂದ ಷರತ್ತುಗಳನ್ನು ವಿಧಿಸಿ ಕಾರ್ಯಾರಂಭ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ.
ಪಾರ್ಸಲ್ ಗಳಿಗೆ ಅವಕಾಶ ನೀಡಿದ್ದರೂ, ಹೋಟೆಲ್ಗಳಿಗೆ ಅನುಕೂಲವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಪ್ರತ್ಯೇಕ ನಿಯಮಗಳನ್ನು ರೂಪಿಸಿ ಅವಕಾಶ ನೀಡಬಹುದು ಎಂದು ಹೇಳಲಾಗಿದೆ.