alex Certify ಕಡಿಮೆ ವೆಚ್ಚದ ಸಿಲಿಂಡರ್: ಅನಿಲಭಾಗ್ಯ, ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆ ವೆಚ್ಚದ ಸಿಲಿಂಡರ್: ಅನಿಲಭಾಗ್ಯ, ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್

ಕಲಬುರಗಿ: ಈ ಹಿಂದೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಗಳಡಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು 14.2 ಕೆ.ಜಿ ತೂಕದ ಎಲ್.ಪಿ.ಜಿ. ಸಿಲಿಂಡರ್ ಬದಲಾಗಿ ಕಡಿಮೆ ವೆಚ್ಚದಲ್ಲಿ ದೊರಕುವ 5 ಕೆ.ಜಿ. ಸಾಮಥ್ರ್ಯದ ಎಲ್.ಪಿ.ಜಿ. ಸಿಲಿಂಡರ್ ಉಪಯೋಗಿಸಬಹುದಾಗಿದೆ.

ಪ್ರತಿ ಸಿಲಿಂಡರ್ ಗಾಗಿ ಹೆಚ್ಚಿನ ದರವನ್ನು ಪಾವತಿಸಲು ಗ್ರಾಹಕರು ಹಿಂಜರಿಯುತ್ತಿದ್ದಾರೆ. ಆದ್ದರಿಂದ 14.2 ಕೆ.ಜಿ. ಸಿಲಿಂಡರ್ ಗೆ ಹಣ ವ್ಯಯಿಸಲಾಗದ ಕುಟುಂಬಗಳು 5 ಕೆ.ಜಿ. ಸಾಮರ್ಥ್ಯದ ಸಿಲಿಂಡರ್ ಪಡೆಯಬಹುದಾಗಿದೆ.  ಸಾಧಾರಣವಾಗಿ ಬಳಸುವ 14.2 ಕೆ.ಜಿ ಸಾಮರ್ಥ್ಯದ ಗೃಹ ಬಳಕೆಯ ಸಿಲಿಂಡರ್ ಬದಲಾಗಿ ವಿಶೇಷ 5 ಕೆ.ಜಿ ತೂಕದ ಸಿಲಿಂಡರ್‍ ಗಳನ್ನು ಬಳಕೆ ಮಾಡುವುದರಿಂದ ಗ್ರಾಹಕರಿಗೆ ಪ್ರತಿ ಸಿಲಿಂಡರ್ ಗೆ ತಗುಲುವ ವೆಚ್ಚ ಸುಮಾರು ಅರ್ಧದಷ್ಟು ಕಡಿಮೆಯಾಗಲಿದೆ.

ಮುಖ್ಯಮಂತ್ರಿ ಅನಿಲಭಾಗ್ಯ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವ ಫಲಾನುಭವಿಗಳು ಅಡುಗೆ ಅನಿಲ ಬಳಕೆಯನ್ನು ಸಮರ್ಪಕವಾಗಿ ಮುಂದುವರಿಸದೇ ಇರುವುದು ಕಂಡು ಬಂದಿದ್ದು, ಆರಂಭದಲ್ಲಿ ನೀಡಲಾಗಿದ್ದ ಉಚಿತ ಸಿಲಿಂಡರ್‍ ಗಳನ್ನು ಬಳಕೆ ಮಾಡಿದ್ದು, ಮುಂದೆ ರಿಫೀಲ್ ಪಡೆಯಲು ವಿಳಂಬ ಮಾಡುತ್ತಿದ್ದಾರೆಂದು ಇತ್ತೀಚೆಗೆ ತೈಲ ಕಂಪನಿಗಳಿಂದ ಪಡೆದಿರುವ ಮಾಹಿತಿಯಿಂದ ತಿಳಿದು ಬಂದಿರುತ್ತದೆ.

ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳು ಅಡುಗೆ ಅನಿಲವನ್ನು ಬಳಸುವಂತೆ ಹಾಗೂ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.  ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕಗಳನ್ನು ಜಿಲ್ಲೆಯಲ್ಲಿ ನೀಡಲಾಗಿದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...