alex Certify ಹಾಲು ಉತ್ಪಾದಕರಿಗೆ ಶಾಕ್: 7-8 ತಿಂಗಳಿಂದ ಬಾರದ ಪ್ರೋತ್ಸಾಹ ಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕರಿಗೆ ಶಾಕ್: 7-8 ತಿಂಗಳಿಂದ ಬಾರದ ಪ್ರೋತ್ಸಾಹ ಧನ

ಕಳೆದ ಏಳೆಂಟು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಕಾರಣ ಹಾಲು ಉತ್ಪಾದಕ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯದಲ್ಲಿ ಸುಮಾರು 9 ಲಕ್ಷಕ್ಕೂ ಅಧಿಕ ರೈತರು ಪ್ರತಿದಿನ ಸುಮಾರು 84 ಲಕ್ಷ ಲೀಟರ್ ಹಾಲು ಡೈರಿಗೆ ಹಾಕಲಿದ್ದು, ಪ್ರತಿ ಲೀಟರ್ ಹಾಲಿಗೆ ಸರ್ಕಾರದಿಂದ 5 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಕೆಲವು ಜಿಲ್ಲೆಗಳಲ್ಲಿ ಮಾರ್ಚ್ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮೇ ತಿಂಗಳಿನಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ.

ಕೆಎಂಎಫ್ ನಿಂದ ಸುಮಾರು 1450  ಕೋಟಿ ರೂ.ಗೂ ಅಧಿಕ ಪ್ರೋತ್ಸಾಹ ಧನವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಬೇಕಿದೆ. ಆದರೆ, 7 -8 ತಿಂಗಳಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಕಾರಣ ಹಾಲು ಉತ್ಪಾದಕರಿಗೆ ಸಂಕಷ್ಟ ಎದುರಾಗಿದೆ. ಎಮ್ಮೆ ಹಸುಗಳಿಗೆ ಮೇವು, ಹಿಂಡಿ ತರಲು ತೊಂದರೆಯಾಗಿದೆ. ಕೂಡಲೇ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...