ನವದೆಹಲಿ: ಕೊರೋನಾ ಲಾಕ್ಡೌನ್ ನಿಂದಾಗಿ ತತ್ತರಿಸಿದ ಆರ್ಥಿಕತೆಗೆ ಉತ್ತೇಜನ ನೀಡಲು ಮತ್ತು ಸಂಕಷ್ಟದಲ್ಲಿರುವವರಿಗೆ ನೆರವಾಗಲು ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡಿದೆ.
ಪ್ಯಾಕೇಜ್ ನಲ್ಲಿ ಹಲವು ವರ್ಗದವರಿಗೆ ಕೊಡುಗೆಗಳನ್ನು ಘೋಷಿಸಲಾಗಿದ್ದು ನಗರದ ಬಡವರಿಗೆ ಮತ್ತು ಕಾರ್ಮಿಕರಿಗೆ ವಲಸಿಗರಿಗೆ ಕಡಿಮೆ ದರದಲ್ಲಿ ಬಾಡಿಗೆ ಮನೆಗಳ ನಿರ್ಮಾಣ ಮಾಡಲಾಗುವುದು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಲಿದ್ದು ಕಡಿಮೆ ದರದಲ್ಲಿ ಬಾಡಿಗೆ ನೀಡಲಾಗುವುದು ಎಂದು ಹೇಳಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಮಾಹಿತಿ ನೀಡಿದ್ದಾರೆ. ಅದೇ ರೀತಿ, ಮಧ್ಯಮ ವರ್ಗದವರಿಗೆ ಗೃಹ ಸಾಲದ ಬಡ್ಡಿಗೆ ನೀಡುವ ಸಬ್ಸಿಡಿಯನ್ನು ಮಾರ್ಚ್ ವರೆಗೆ ವಿಸ್ತರಣೆ ಮಾಡಲಾಗಿದ್ದು, ಇದಕ್ಕೆ 70 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. 6ರಿಂದ 8 ಲಕ್ಷ ರೂಪಾಯಿವರೆಗಿನ ಆದಾಯ ಇರುವವರಿಗೆ ಗೃಹ ಸಾಲದ ಸಬ್ಸಿಡಿ ಅವಧಿಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.