ಮೈಸೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ರೈತರಿಗೆ ಹೊಸ ಸಾಲ ನೀಡಲು ಸಹಕಾರ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಸಹಕಾರ ಖಾತೆ ಸಚಿವ ಎಸ್.ಟಿ. ಸೋಮಶೇಖರ್ ಈ ಕುರಿತು ಮಾಹಿತಿ ನೀಡಿದ್ದು, ರೈತರಿಗೆ ಹೊಸ ಸಾಲ ನೀಡಲು ಸಹಕಾರ ಬ್ಯಾಂಕುಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಫೇಸ್ ಬುಕ್ ಲೈವ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ ವರ್ಷ 13 ಸಾವಿರ ಕೋಟಿ ರೂಪಾಯಿ ಸಾಲ ನೀಡಿದ್ದು ಈ ವರ್ಷ 14 ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ರೈತರ ಹಳೆಯ ಪಹಣಿ ಪತ್ರದ ಆಧಾರದ ಮೇಲೆ ಹೊಸ ಸಾಲ ಪಡೆಯಬಹುದಾಗಿದೆ. ಸಾಲ ಪಾವತಿಸುವಂತೆ ಫೈನಾನ್ಸ್ ಕಂಪನಿಗಳು ಸಾಲಗಾರರ ಮೇಲೆ ಒತ್ತಡ ಹೇರಬಾರದು. ಈ ಕುರಿತು ಆರ್ಥಿಕ ಇಲಾಖೆಯಿಂದ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.