alex Certify ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಸೋಮಶೇಖರ್ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವ ಸೋಮಶೇಖರ್ ಗುಡ್ ನ್ಯೂಸ್

ಬೆಂಗಳೂರು: ಎಲ್ಲಾ ಅರ್ಹ ರೈತರಿಗೆ ಸಾಲ ಮನ್ನಾ ಸೌಲಭ್ಯ ಸಿಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರು ಬೆಳಗಾವಿ ರೈತರಿಗೆ ಸಾಲ ಮನ್ನಾ ಸಂಪೂರ್ಣವಾಗಿ ತಲುಪದ ಬಗ್ಗೆ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ 2018 – 19 ನೇ ಸಾಲಿನ ಸಾಲ ಮನ್ನಾ ಯೋಜನೆ ತಲುಪದ ಎಲ್ಲಾ ಅರ್ಹ ರೈತರಿಗೆ ಕೂಡಲೇ ಸಾಲಮನ್ನಾ ಪ್ರಯೋಜನ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಬೆಳಗಾವಿಯ 2033 ಜನ ಸೇರಿದಂತೆ ರಾಜ್ಯದಲ್ಲಿ ತಾಂತ್ರಿಕ ಕಾರಣದಿಂದ ಸಾಲ ಮನ್ನಾ ಯೋಜನೆ ಸೌಲಭ್ಯ ಪಡೆಯದ ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲಾಗುವುದು. ಎಲ್ಲಾ ಅರ್ಹ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...