alex Certify ರೈತರಿಗೆ ಭರ್ಜರಿ ಗುಡ್ ನ್ಯೂಸ್: ಶ್ರೀಗಂಧ ಬೆಳೆಯಲು, ಮಾರಲು ‘ಮುಕ್ತ’ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಶ್ರೀಗಂಧ ಬೆಳೆಯಲು, ಮಾರಲು ‘ಮುಕ್ತ’ ಅವಕಾಶ

ಬೆಂಗಳೂರು: ಶ್ರೀಗಂಧ ನೀತಿ -2022 ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ ಎಂದು ಸಂಪುಟ ಸಭೆಯ ನಂತರ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು. ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸಂಪುಟ ಸಭೆಯ ನಂತರ ಸುಧಾಕರ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...