alex Certify ಸಹಕಾರಿ ಸಂಸ್ಥೆಗಳ ಸದಸ್ಯರಿಗೆ ಮುಖ್ಯ ಮಾಹಿತಿ: ಏಕರೂಪ ಬಡ್ಡಿದರ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಕಾರಿ ಸಂಸ್ಥೆಗಳ ಸದಸ್ಯರಿಗೆ ಮುಖ್ಯ ಮಾಹಿತಿ: ಏಕರೂಪ ಬಡ್ಡಿದರ ನಿಗದಿ

ಬೆಂಗಳೂರು: ರಾಜ್ಯದಲ್ಲಿನ ಸಹಕಾರ ಸೊಸೈಟಿಗಳ ವಂಚನೆಗೆ ಕಡಿವಾಣ ಹಾಕುವ ಉದ್ದೇಶದಿಂದ ಏಕರೂಪದ ಬಡ್ಡಿ ದರ ನಿಗದಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರು ಈ ಬಗ್ಗೆ ಪ್ರಸ್ತಾಪಿಸಿದಾಗ, ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವು ಸಹಕಾರಿ ಸೊಸೈಟಿಗಳಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಸದಸ್ಯರನ್ನಾಗಿ ಮಾಡಿಕೊಂಡು ವಂಚಿಸಲಾಗುತ್ತಿದೆ. ಬಡ್ಡಿ ನಿರ್ಧರಿಸುವ ಅಧಿಕಾರ ಬ್ಯಾಂಕುಗಳ ಆಡಳಿತ ಮಂಡಳಿಗಳಿಗೆ ಇದ್ದು, ಕೆಲವು ಬ್ಯಾಂಕುಗಳು ಈ ರೀತಿ ಬಡ್ಡಿ ದರ ನಿಗದಿ ಮಾಡಿಕೊಂಡು ವಂಚಿಸುತ್ತಿವೆ. ಇದನ್ನು ತಡೆಯಲು ಏಕರೂಪದ ಬಡ್ಡಿ ದರ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...