alex Certify ಮೋದಿ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ: 3 ಲಕ್ಷ ರೂ.ವರೆಗಿನ ಸಾಲದ ಮೇಲಿನ ಬಡ್ಡಿ ರಿಯಾಯಿತಿ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ: 3 ಲಕ್ಷ ರೂ.ವರೆಗಿನ ಸಾಲದ ಮೇಲಿನ ಬಡ್ಡಿ ರಿಯಾಯಿತಿ ಕೊಡುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗೆ ಭರ್ಜರಿ ಸುದ್ದಿ ನೀಡಿದೆ. 3 ಲಕ್ಷ ರೂ.ವರೆಗಿನ ಸಣ್ಣ ಕೃಷಿ ಸಾಲಗಳ ಮೇಲೆ ವಾರ್ಷಿಕ ಶೇಕಡ 1.5 ರ ಬಡ್ಡಿ ರಿಯಾಯಿತಿಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ರೈತರು ಸಕಾಲಿಕ ಸಾಲ ಮರುಪಾವತಿಯ ಮೇಲೆ 4 ಪ್ರತಿಶತ ಬಡ್ಡಿಯಲ್ಲಿ ಅಲ್ಪಾವಧಿ ಸಾಲ ಪಡೆಯುವುದನ್ನು ಮುಂದುವರಿಸುತ್ತಾರೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಸಾಲದ ಹರಿವನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದರ ಅಡಿಯಲ್ಲಿ, ಸಾಲ ನೀಡುವ ಸಂಸ್ಥೆಗಳಿಗೆ(ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಗಣಕೀಕೃತ ಪ್ರಾಥಮಿಕ ಕೃಷಿ ಸಾಲ ಸಂಘಗಳು) 2022-23 ರಿಂದ 2024-25 ರ ಆರ್ಥಿಕ ವರ್ಷಗಳಿಗೆ ಸಹಾಯವನ್ನು ನೀಡಲಾಗುತ್ತದೆ. ಇದಕ್ಕಾಗಿ 34,856 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಅನುರಾಗ್ ಠಾಕೂರ್ ಹೇಳಿದರು.

ಇದಲ್ಲದೇ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯಕ್ಕೆ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯ ಮಿತಿಯನ್ನು 50,000 ಕೋಟಿ ರೂ.ಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ. ಸಾಮಾನ್ಯ ಬಳಕೆದಾರರಿಗೆ ಸಾಂಪ್ರದಾಯಿಕ ಜ್ಞಾನ ಡಿಜಿಟಲ್ ಲೈಬ್ರರಿ ಡೇಟಾಬೇಸ್‌ ಗೆ ಪ್ರವೇಶ ಅನುಮತಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...