alex Certify 2 ನೇ ಬಾರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ನೇ ಬಾರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ ಸ್ವ-ನಿಧಿ ಯೋಜನೆಯಡಿ ಎರಡನೇ ಅವಧಿಗೆ ಸಾಲ ಪಡೆಯಲು ಶಹಾಬಾದ ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಮಾರಾಟ ಮಾಡುವ ವ್ಯಾಪಾರಸ್ಥರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಶಹಾಬಾದ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ಬ್ಯಾಂಕ್‍ನಿಂದ 10,000 ರೂ.ಗಳ ಸಾಲ ಪಡೆದ ಬೀದಿ-ಬದಿ ವ್ಯಾಪಾರಸ್ಥರಿಗೆ ಎರಡನೇ ಅವಧಿಗಾಗಿ 20,000 ರೂ.ಗಳ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬ್ಯಾಂಕ್‍ನಿಂದ ಪಡೆದ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಿದ ವ್ಯಾಪಾರಸ್ಥರು ಸಾಲ ಮರು ಪಾವತಿಸಿದ ಕುರಿತು ಸಂಬಂಧಪಟ್ಟ ಬ್ಯಾಂಕ್‍ನಿಂದ ಪ್ರಮಾಣಪತ್ರ ಪಡೆದು ಮತ್ತು ನಿಗದಿತ ದಾಖಲೆಗಳೊಂದಿಗೆ ಪಿ.ಎಂ. ಸ್ವ-ನಿಧಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಹಾಬಾದ ನಗರಸಭೆಯ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...