alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸ್ವನಿಧಿ ಯೋಜನೆಯಡಿ 10 ಸಾವಿರ ರೂ. ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸ್ವನಿಧಿ ಯೋಜನೆಯಡಿ 10 ಸಾವಿರ ರೂ. ನೆರವು

ನವದೆಹಲಿ: ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ವಿತರಿಸುವ ಕಾರ್ಯವನ್ನು ತ್ವರಿತಗೊಳಿಸಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕ್ರಮಕೈಗೊಂಡಿದೆ.

ವಿವಿಧ ಬ್ಯಾಂಕುಗಳ ಜೊತೆಗೆ ಸ್ವನಿಧಿ ಯೋಜನೆಯ ಪೋರ್ಟಲ್ ಅನ್ನು ಸಂಯೋಜಿಸಲಾಗಿದೆ. ಇದಕ್ಕೆ ಅನುಕೂಲವಾಗುವಂತೆ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ. ಎಸ್ಬಿಐ ಇ- ಮುದ್ರಾ ಪೋರ್ಟಲ್ ಜೊತೆಗೆ ಜೋಡಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗಿದೆ.

ಸ್ವನಿಧಿ ಯೋಜನೆಯಡಿ ಸಾಲ ವಿತರಣೆ ವಿಳಂಬವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸರ್ಕಾರ ವಿವಿಧ ಬ್ಯಾಂಕುಗಳ ನಡುವೆ ಸಂಪರ್ಕ ಸಮನ್ವಯ ಸಾಧಿಸಲು ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್ಫೇಸ್ ಬಳಸುವ ಮೂಲಕ ಶೀಘ್ರವಾಗಿ ಸಾಲ ಮಂಜೂರು ಮಾಡಲು ಸಾಧ್ಯವಾಗುತ್ತದೆ.

ಬೀದಿ ಬದಿ ವ್ಯಾಪಾರಸ್ಥರಿಗೆ ತಲಾ 10 ಸಾವಿರ ರೂಪಾಯಿ ನೀಡಲಿದ್ದು 10 ಕಂತುಗಳಲ್ಲಿ ವ್ಯಾಪಾರಿಗಳು ಮರು ಪಾವತಿಸಬೇಕು. ಸಕಾಲದಲ್ಲಿ ಸಾಲ ಪಾವತಿಸಿದವರಿಗೆ ಬಡ್ಡಿಯಲ್ಲಿ ಶೇಕಡ 7 ರಷ್ಟು ಸಬ್ಸಿಡಿ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...