ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಭಾರತದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗ್ತಿದೆ. ಈಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಬಂದಿದೆ.
ವಿಶ್ವ ಬ್ಯಾಂಕ್ ಭಾರತಕ್ಕೆ ಆರ್ಥಿಕ ನೆರವು ನೀಡುವ ಘೋಷಣೆ ಮಾಡಿದೆ. ವಿಶ್ವ ಬ್ಯಾಂಕ್, ಭಾರತಕ್ಕೆ ಒಂದು ಬಿಲಿಯನ್ ಡಾಲರ್ ಸಾಮಾಜಿಕ ಸಂರಕ್ಷಣಾ ಪ್ಯಾಕೇಜ್ ಘೋಷಿಸಿದೆ. ಇದ್ರಿಂದ ಭಾರತಕ್ಕೆ ಆರ್ಥಿಕ ನೆರವು ಸಿಗಲಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೆರವಾಗಲು 20 ಲಕ್ಷ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.