BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ.

ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು ಗಲಾಟೆ ಮಾಡುತ್ತಿತ್ತು. ಈ ವೇಳೆ ಜಗಳ ಮಾಡಬೇದಿ ಎಂದು ವಕೀಲ ವಿಜಯ್ ಕುಮಾರ್ ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ದುಷ್ಕರ್ಮಿಗಳು ವಿಜಯ್ ಕುಮಾರ್ ಭುಜಕ್ಕೆ ಚಾಕುವಿನಿಂದ ಚುಚ್ಚಿ ಸೌಂಡ್ ಮಾಡಬೇಡ ಎಂದು ಆವಾಜ್ ಹಾಕಿದ್ದಾರೆ. ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ರಾಮನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಕೀಲನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ಗುಂಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read