ವರುಣಾದಲ್ಲಿ 60 ಸಾವಿರ ಲೀಡ್ ಕೊಡ್ರಿ, ನನ್ನ ಯಾರೂ ಮುಟ್ಟಕ್ಕಾಗಲ್ಲ: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟರೆ ನನ್ನನ್ನು ಯಾರೂ ಮುಟ್ಟಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ವರುಣಾದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ನಾನು ಇರಬೇಕು ಅಂದರೆ ಅರವತ್ತು ಸಾವಿರ ಲೀಡ್ ಕೊಡಿ. ನಾನು ಇರಬೇಕಾ ಬೇಡ್ವಾ ಹೇಳಿ ಎಂದು ಪ್ರಶ್ನಿಸಿದ್ದಾರೆ.

ಮೈಸೂರಿನ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ ಸಿಎಂ, ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೊಟ್ಟಿದ್ದಕ್ಕಿಂತ ಹೆಚ್ಚಿನ ಲೀಡ್ ಕೊಡಬೇಕು. ನೀವೆಲ್ಲ 60,000 ಲೀಡ್ ಕೊಟ್ಟರೆ ಸಂತೋಷ ಆಗುತ್ತೆ. ನನ್ನನ್ನು ಯಾರೂ ಮುಟ್ಟಕ್ಕಾಗಲ್ಲ. ನಿಮ್ಮಲ್ಲಿ ಕೈಜೋಡಿಸಿ ಮನವಿ ಮಾಡುತ್ತೇನೆ. 60 ಸಾವಿರಕ್ಕೂ ಅಧಿಕ ಲೀಡ್ ಕೊಡಿ ಎಂದು ಹೇಳಿದ್ದಾರೆ.

ಇತ್ತೀಚೆಗೆ ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲದೆ ಇದ್ದರೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read