ಲಿಂಗಾಯತ ಸಮುದಾಯ ಟೀಕಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶಕ್ಕೆ ಸಿದ್ಧರಾಮಯ್ಯ ಅಡಿಗಲ್ಲು: ಆರ್. ಅಶೋಕ್

ಬೆಂಗಳೂರು: ಲಿಂಗಾಯತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಇಲಾಖೆ ಸಚಿವ ಆರ್. ಅಶೋಕ್, ಈಗಾಗಲೇ ಮೋದಿ ಸಮುದಾಯವನ್ನು ಟೀಕಿಸಿದ ರಾಹುಲ್ ಗಾಂಧಿಯವರಿಗೆ ಶಿಕ್ಷೆಯಾಗಿದೆ. ರಾಹುಲ್ ಗಾಂಧಿ ಈಗ ಫುಟ್ಪಾತ್ ಮೇಲೆ ಅಲೆದಾಡುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಲಿಂಗಾಯಿತ ಸಮುದಾಯದ ಕೋಟ್ಯಂತರ ಜನರ ಶಾಪ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ತಟ್ಟಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶಕ್ಕೆ ಸಿದ್ದರಾಮಯ್ಯ ಅವರೇ ಅಡಿಗಲ್ಲು ಹಾಕಿದ್ದಾರೆ. ಈ ಹಿಂದೆ ವೀರಶೈವ ಲಿಂಗಾಯಿತ ಸಮುದಾಯ ಒಡೆಯಲು ಯತ್ನಿಸಿದ್ದರು ಎಂದು ಅಶೋಕ್ ಟೀಕಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read