ಬೆಂಗಳೂರು: ಆಂಧ್ರಪ್ರದೇಶದ YSRCP ಮಾಜಿ ಶಾಸಕ ಚೆವಿ ರೆಡ್ಡಿ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆವಿ ರೆಡ್ಡಿ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ.
ಜಗನ್ ಅವಧಿಯಲ್ಲಿ ಚಂದ್ರಗಿರಿ ಶಾಸಕರಾಗಿದ್ದ ಚೆವಿ ರೆಡ್ಡಿ ಭಾಸ್ಕರ್ ರೆಡ್ಡಿ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದರು. ಆಂಧ್ರಪ್ರದೇಶದ ಅಬಕಾರಿ ಹಗರಣದ ಆರೋಪಿ ಆಗಿರುವ ಚೆವಿ ರೆಡ್ಡಿ ಗೆ ಲುಕೌಟ್ ನೋಟಿಸ್ ನೀಡಿದ್ದ ಕಾರಣ ಅವರನ್ನು ಬಂಧಿಸಲಾಗಿದೆ.
ಮಧ್ಯರಾತ್ರಿ ಆಂಧ್ರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆಂಧ್ರಪ್ರದೇಶದ ಎಎಸ್ಪಿ ಮಹೇಶ್ ಅವರಿಗೆ ಮಾಜಿ ಶಾಸಕ ಚೆವಿ ರೆಡ್ಡಿ ಅವರನ್ನು ಹಸ್ತಾಂತರಿಸಲಾಗಿದ್ದು, ಆಂಧ್ರಪ್ರದೇಶ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
ಆಂಧ್ರಪ್ರದೇಶದಲ್ಲಿ ಮದ್ಯ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಚಂದ್ರಗಿರಿಯ ಮಾಜಿ ಶಾಸಕ ಚೆವಿ ರೆಡ್ಡಿ ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.
ಲುಕೌಟ್ ನೋಟಿಸ್ ಹಿನ್ನೆಲೆಯಲ್ಲಿ ಕೊಲಂಬೊಗೆ ವಿಮಾನ ಹತ್ತಲು ಸಿದ್ಧವಾಗಿದ್ದ ವೈಎಸ್ಆರ್ಸಿಪಿ ನಾಯಕನನ್ನು ವಿಮಾನ ಹತ್ತದಂತೆ ತಡೆಯಲಾಯಿತು.
ವಿಮಾನ ನಿಲ್ದಾಣದ ಅಧಿಕಾರಿಗಳು ಎಸ್ಐಟಿಗೆ ಅವರ ಬಂಧನದ ಬಗ್ಗೆ ಮಾಹಿತಿ ನೀಡಿದ ನಂತರ, ವಿಜಯವಾಡದ ತಂಡವು ಚೆವಿರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡಿದೆ.