alex Certify ʼನಿರ್ಬಂಧʼ ದ ಮಧ್ಯೆಯೂ ಗಂಗೊಳ್ಳಿಯಲ್ಲಿ ಪ್ರಮೋದ್‌ ಮುತಾಲಿಕ್‌ ಪ್ರತ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನಿರ್ಬಂಧʼ ದ ಮಧ್ಯೆಯೂ ಗಂಗೊಳ್ಳಿಯಲ್ಲಿ ಪ್ರಮೋದ್‌ ಮುತಾಲಿಕ್‌ ಪ್ರತ್ಯಕ್ಷ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರ ಉಡುಪಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು, ಹೀಗಾಗಿ ಇಂದು ಗಂಗೊಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುವುದು ಅನುಮಾನವಾಗಿತ್ತು.

ಆದರೆ ಜಿಲ್ಲಾಡಳಿತದ ನಿರ್ಬಂಧದ ಮಧ್ಯೆಯೂ ಪ್ರಮೋದ್‌ ಮುತಾಲಿಕ್‌ ಗಂಗೊಳ್ಳಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕಳೆದ ರಾತ್ರಿಯೇ ಅವರು ಗಂಗೊಳ್ಳಿಗೆ ಬಂದಿದ್ದರೆನ್ನಲಾಗಿದ್ದು, ಆದರೆ ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಈ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ತಮ್ಮ ಭೇಟಿಗೆ ನಿರ್ಬಂಧ ವಿಧಿಸಿರುವುದು ಬೇಸರ ತಂದಿದೆ ಎಂದು ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...