alex Certify ʼಹನುಮಾನ್‌ ಚಾಲೀಸಾʼ ಪಠಿಸಲು ಮುಂದಾದವರಿಗೆ ಮಹಾರಾಷ್ಟ್ರ ಡಿಸಿಎಂ ಕಛೇರಿ ಮುಂದೆ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಹನುಮಾನ್‌ ಚಾಲೀಸಾʼ ಪಠಿಸಲು ಮುಂದಾದವರಿಗೆ ಮಹಾರಾಷ್ಟ್ರ ಡಿಸಿಎಂ ಕಛೇರಿ ಮುಂದೆ ತಡೆ

ತಮ್ಮ ಬೇಡಿಕೆ ಈಡೇರಿಸುವಂತೆ ಮಹಾರಾಷ್ಟ್ರ ಉಪ‌ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಒತ್ತಾಯಿಸಿ ‘ಹನುಮಾನ್ ಚಾಲೀಸಾ’ ಪಠಣ ಮಾಡಲು ಅವರ ಕಚೇರಿಗೆ ತೆರಳುತ್ತಿದ್ದಾಗ ನಾಗ್ಪುರ ಪೊಲೀಸರು ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್‌ಎಚ್‌ಜಿ) ಸದಸ್ಯರನ್ನು ತಡೆದಿದ್ದಾರೆ.

ನೆರೆಯ ವಾರ್ಧಾದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಫಡ್ನವಿಸ್ ಅವರ ತವರು ನಾಗ್ಪುರ ನಗರದಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ರಾಜ್ಯ ಸರ್ಕಾರವು ತಡೆಹಿಡಿದಿರುವ ಗೌರವಧನ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರು ಭಾನುವಾರ ಪ್ರತಿಭಟನೆಗೆ ಕರೆ ನೀಡಿದ ನಂತರ ನಗರ ಪೊಲೀಸರು ನಾಗ್ಪುರ ನೈರುತ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ವಾರ್ಧಾ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಫಡ್ನವಿಸ್ ಅವರ ಕಚೇರಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...