alex Certify ಅಂಗನವಾಡಿ ಕಾರ್ಯಕರ್ತೆ – ಸಹಾಯಕಿಯರ ಹುದ್ದೆಗೆ ನೇಮಕಾತಿ; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆ – ಸಹಾಯಕಿಯರ ಹುದ್ದೆಗೆ ನೇಮಕಾತಿ; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹಾಗೂ ಹೊಸನಗರ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ.

ಸಾಗರ ತಾಲೂಕು ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮರಾಠಿ ಎಸ್.ಸಿ. ಕಾಲೋನಿ, ಮತ್ತು ಕಾರ್ಗಲ್-1 ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಮಲ್ಲಂದೂರು, ಆಲಳ್ಳಿ, ಮುತ್ತಲಬೈಲು, ಬರೂರು, ವಡ್ನಾಲ, ನೆಹರೂ ನಗರ-1, ಲೋಹಿಯ ನಗರ-1, ಮಂಡವಳ್ಳಿ ಮತ್ತು ತೆಂಕೋಡು ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇದ್ದು, ಈ ಸ್ಥಾನಗಳನ್ನು ತುಂಬಲು ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಾಗೆಯೇ ಹೊಸನಗರ ತಾಲೂಕು ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ವಡಗೇರಿ ಮಿನಿ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಅಡಗೋಡಿ, ಕೆ.ವಿ. ಅಬ್ಬಿಗಲ್ಲು, ಕಡಸೂರು, ಬರುವೆ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇದ್ದು, ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು www.anganwadirecruit.kar.nic.in ವೆಬ್‍ ಸೈಟ್ ನಲ್ಲಿ ಆನ್‍ಲೈನ್ ಮೂಲಕ ಸೆಪ್ಟೆಂಬರ್ 16 ರೊಳಗೆ ಸಲ್ಲಿಸುವಂತೆ‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...