alex Certify ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ; ನಿಮಗೆ ತಿಳಿದಿರಲಿ ಈ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ಡಿಸೆಂಬರ್ ತಿಂಗಳ ಚಳಿಯ ನಡುವೆ ಸುರಿಯುತ್ತಿರುವ ಈ ಮಳೆ ಸಾರ್ವಜನಿಕರಲ್ಲಿ ಅನಾರೋಗ್ಯ ಸಮಸ್ಯೆಯನ್ನುಂಟು ಮಾಡುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರಿಗಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಈ ಹವಾಮಾನದ ಸಂದರ್ಭದಲ್ಲಿ ಯಾವಾಗಲೂ ಬೆಚ್ಚಗಿನ ನೀರು ಕುಡಿಯುವುದು ಅಗತ್ಯವಾಗಿದ್ದು, ಜೊತೆಗೆ ಸುಲಭವಾಗಿ ಜೀರ್ಣವಾಗುವಂತಹ ಹಾಗೂ ಬಿಸಿ ಪದಾರ್ಥಗಳನ್ನು ಸೇವಿಸುವುದು ಸೂಕ್ತ ಎಂದು ತಿಳಿಸಲಾಗಿದೆ. ಅಲ್ಲದೆ ಬೆಚ್ಚಗಿರುವ ಸಲುವಾಗಿ ಸ್ವೆಟರ್, ಸಾಕ್ಸ್ ಹಾಗೂ ಕೈಗವಸು ಧರಿಸುವಂತೆ ಸಲಹೆ ನೀಡಲಾಗಿದೆ.

ಸ್ನಾನಕ್ಕೆ ಬಿಸಿ ನೀರನ್ನು ಬಳಸುವುದು ಅಗತ್ಯವಾಗಿದ್ದು, ಆದಷ್ಟು ಹೊರ ಸಂಚಾರ ತಪ್ಪಿಸುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ. ಜೊತೆಗೆ ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳುವುದು. ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವವರಿಂದ ದೂರವಿರುವುದು ಅಗತ್ಯವಾಗಿದೆ.

ಜೊತೆಗೆ ತಣ್ಣಗಿನ ಪಾನೀಯ, ಐಸ್ ಕ್ರೀಮ್ ಯಾವುದೇ ಕಾರಣಕ್ಕೂ ಸೇವಿಸಬಾರದು‌. ರೆಫ್ರಿಜರೇಟರ್ ಆಹಾರದಿಂದ ದೂರವಿರುವುದು ಒಳ್ಳೆಯದು ಎಂದು ತಿಳಿಸಲಾಗಿದ್ದು, ಮಳೆಯಲ್ಲಿ ನೆನೆಯುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...