alex Certify ಅತ್ಯಾಚಾರ ಆರೋಪಿ ಕುರಿತು ಬೆಚ್ಚಿಬೀಳಿಸುವ ಸಂಗತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಆರೋಪಿ ಕುರಿತು ಬೆಚ್ಚಿಬೀಳಿಸುವ ಸಂಗತಿ ಬಹಿರಂಗ

ಮೈಸೂರಿನ ಚಾಮುಂಡಿಬೆಟ್ಟದ ಲಲಿತಾದ್ರಿ ಗುಡ್ಡ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಕುರಿತಂತೆ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

ಇದರ ಮಧ್ಯೆ ಪೊಲೀಸರ ವಿಚಾರಣೆ ವೇಳೆ ಆರೋಪಿಗಳ ಕುರಿತು ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗವಾಗುತ್ತಿವೆ ಎಂದು ತಿಳಿದುಬಂದಿದೆ. ಆರೋಪಿಗಳ ಪೈಕಿ ಓರ್ವ ಬಾಲಾಪರಾಧಿ ಎನ್ನಲಾಗುತ್ತಿದ್ದು, ಆತನ ಜನ್ಮ ದಾಖಲೆಗಳನ್ನು ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದೆ.

ಇವರೆಲ್ಲರೂ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದು, ಅಪರಾಧ ಕೃತ್ಯದಿಂದ ಗಳಿಸಿದ ಹಣವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದ್ದರೆನ್ನಲಾಗಿದೆ. ಕುಡಿತ ಮಾತ್ರವಲ್ಲದೆ ಇನ್ನಿತರ ದುಶ್ಚಟಗಳಿಗೂ ಇವರುಗಳು ದಾಸರಾಗಿದ್ದು, ಹಣ ಖಾಲಿಯಾದಾಗ ಅಪರಾಧ ಕೃತ್ಯ ಎಸಗುತ್ತಿದ್ದರೆಂದು ಹೇಳಲಾಗಿದೆ.

ಆರೋಪಿಗಳ ಪೈಕಿ ಓರ್ವ ಭಗ್ನಪ್ರೇಮಿಯಾಗಿದ್ದು, ಮೂವರು ಯುವತಿಯರು ಕೈಕೊಟ್ಟ ಬಳಿಕ ಮತ್ತಷ್ಟು ಕ್ರೂರಿಯಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಯುವತಿಯರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದದ್ದಲ್ಲದೆ ಸದಾ ತನ್ನ ಬಳಿ ಕಾಂಡೋಮ್ ಇಟ್ಟುಕೊಂಡು ತಿರುಗುತ್ತಿದ್ದ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...