alex Certify ಅಪಸ್ವರ ಎತ್ತಿದವರ ಪಾತ್ರವೇನೆಂದು ವಿಮರ್ಶಿಸಿಕೊಳ್ಳಲಿ: ಬಸವರಾಜ್ ಬಿಮ್ಮಾಯಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಸ್ವರ ಎತ್ತಿದವರ ಪಾತ್ರವೇನೆಂದು ವಿಮರ್ಶಿಸಿಕೊಳ್ಳಲಿ: ಬಸವರಾಜ್ ಬಿಮ್ಮಾಯಿ ತಿರುಗೇಟು

ಬೆಂಗಳೂರು: ನಾಯಕತ್ವದ ಬಗ್ಗೆ ಕೆಲವರು ಅಪಸ್ವರ ಎತ್ತುತ್ತಿದ್ದಾರೆ. ಅಪಸ್ವರ ಎತ್ತಿದವರ ಪಾತ್ರವೇನು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗುಡುಗಿದ್ದಾರೆ.

ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ. ಕೊರೊನಾ ಮೊದಲ ಅಲೆ, ಲಾಕ್ ಡೌನ್, ಎರಡನೆ ಅಲೆ ಈ ನಡುವೆ ಪ್ರವಾಹ ಹೀಗೆ ನಿರಂತರ ಸಂಕಷ್ಟ ಎದುರಿಸಿದ್ದಾರೆ. ಆದರೂ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪ್ರತಿದಿನ ಜನ ಹಿತಕ್ಕಾಗಿ, ಜನರ ಸಂಕಷ್ಟಕ್ಕಾಗಿ ಸ್ಪಂದಿಸುತ್ತಿದ್ದಾರೆ ಇಷ್ಟೆಲ್ಲ ಆದರೂ ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿರುವುದರಿಂದ ಅವರ ಮನಸ್ಸಿಗೆ ನೋವಾಗಿದೆ. ಹೀಗಾಗಿ ಅಸಮಾಧಾನಿತರಿಗೆ ಬಿಸಿಮುಟ್ಟಿಸುವ ನಿಟ್ಟಿನಲ್ಲಿ ವರಿಷ್ಠರು ಸೂಚಿಸಿದರೆ ರಾಜೀನಾಮೆಗೆ ಸಿದ್ಧ ಎಂದಿದ್ದಾರೆ ಎಂದರು.

ಕೋವಿಡ್ ಸಂದರ್ಭದಲ್ಲಿ ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಸರ್ಕಾರಿ ನೌಕರರ ಸಂಬಳ ನಿಂತಿದೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಡಿದೆ. ಜನರ ಸ್ಥಿತಿ ದುಃಸ್ಥಿತಿ ತಲುಪಿದೆ. ಆದರೆ ನಮ್ಮ ರಾಜ್ಯದಲ್ಲಿ ನೌಕರರಿಗೆ ಸಂಬಳ ನಿಂತಿಲ್ಲ. ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿಲ್ಲ. ಕೊರೊನಾ ಸಂಕಷ್ಟದ ನಡುವೆಯೂ ಸರ್ಕಾರವನ್ನು ಯಡಿಯೂರಪ್ಪನವರು ಸುಸೂತ್ರವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ

ಯಡಿಯೂರಪ್ಪನವರು ಪಕ್ಷದ ಅತ್ಯಂತ ಹಿರಿಯ ಸಂಘಟಕರು. ಇದನ್ನು ಹೈಕಮಾಂಡ್ ಕೂಡ ಗುರುತಿಸಿದೆ. ಪ್ರಹ್ಲಾದ್ ಜೋಶಿ, ಸಿ.ಟಿ. ರವಿ, ನಳೀನ್ ಕುಮಾರ್ ಕಟೀಲ್ ಎಲ್ಲರೂ ಯಡಿಯೂರಪ್ಪನವರೇ ನಮ್ಮ ನಾಯಕರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಯಾವುದೇ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...