alex Certify ಅಪ್ಪ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲು ಮುಂದಾದ ಹಿನ್ನಲೆಯಲ್ಲಿ ಮುಜುಗರಕ್ಕೆ ಸಿಲುಕಿದ ಯಶ್ವಂತ್‌ ಸಿನ್ಹಾ ಪುತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲು ಮುಂದಾದ ಹಿನ್ನಲೆಯಲ್ಲಿ ಮುಜುಗರಕ್ಕೆ ಸಿಲುಕಿದ ಯಶ್ವಂತ್‌ ಸಿನ್ಹಾ ಪುತ್ರ

ರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸುತ್ತಿರುವುದು ಸಿನ್ಹಾ ಅವರ ಪುತ್ರ ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ.

ಈ ಮುಜುಗರದಿಂದ ಹೊರಬರಲು ಜಯಂತ್ ಸಿನ್ಹಾ, `ನಾನು ಯಶವಂತ ಸಿನ್ಹಾ ಮಗ ಎಂಬ ಕಾರಣಕ್ಕೆ ಈ ವಿಚಾರದಲ್ಲಿ ನನ್ನ ಕಡೆ ನೋಡಬೇಡಿʼ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, `ಪ್ರತಿಪಕ್ಷಗಳು ನನ್ನ ತಂದೆ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಿರುವುದು ತಿಳಿಯಿತು. ಈ ವಿಚಾರವಾಗಿ ಅನೇಕ ಜನರು ಮತ್ತು ಮಾಧ್ಯಮ ಮಿತ್ರರು ನನಗೆ ಕರೆ ಮಾಡಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ನಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದೇನೆ. ಈ ವಿಚಾರವನ್ನು ಕುಟುಂಬದ ವಿಚಾರವನ್ನಾಗಿ ಮಾಡಬೇಡಿ ಮತ್ತು ಈ ಬಗ್ಗೆ ನನ್ನ ಕಡೆ ನೋಡಬೇಡಿ ಎಂದು ಮನವಿ ಮಾಡುತ್ತಿದ್ದೇನೆ ಎಂದು ಜಯಂತ್ ಸಿನ್ಹಾ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...