alex Certify ಅಮರನಾಥ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಯಾತ್ರಾರ್ಥಿಗಳು ಸುರಕ್ಷಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮರನಾಥ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಯಾತ್ರಾರ್ಥಿಗಳು ಸುರಕ್ಷಿತ

ಜಮ್ಮು ಮತ್ತು ಕಾಶ್ಮೀರದ ಅಮರನಾಥ ಗುಹೆ ಬಳಿ ನಿನ್ನೆ ಸಂಭವಿಸಿದ ಮೇಘಸ್ಪೋಟದಲ್ಲಿ ಶಿವಮೊಗ್ಗದಿಂದ ತೆರಳಿದ್ದ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ.

ಶಿವಮೊಗ್ಗದಿಂದ ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ 16 ಮಹಿಳೆಯರು ಅಮರನಾಥ ಯಾತ್ರೆಗೆ ಜೂ. 30 ರಂದು ತೆರಳಿದ್ದರು.

ನಿನ್ನೆ ಸಂಭವಿಸಿದ ಮೇಘಸ್ಪೋಟದ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೇ ಸುರಕ್ಷಿತವಾಗಿದ್ದಾರೆ. ವೈಷ್ಣೋದೇವಿ ದರ್ಶನ ಪಡೆದು ಅಮರನಾಥ ಯಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಮೇಘಸ್ಪೋಟದಿಂದ ಯಾತ್ರೆಗೆ ನಿರ್ಬಂಧ ಹೇರಿದ ಹಿನ್ನಲೆಯಲ್ಲಿ ಯಾತ್ರೆಯನ್ನು ಮೊಟಕುಗೊಳಿಸಲಾಗಿದೆ.

ಇಂದು ಮುಂಜಾನೆ ಹೆಲಿಪ್ಯಾಡ್ ನಲ್ಲಿ ವಿಶ್ರಾಂತಿ ಪಡೆದು ಶ್ರೀನಗರಕ್ಕೆ ಪ್ರಯಾಣ ಬೆಳೆಸಿದ್ದೇವೆ. ಶ್ರೀನಗರದಿಂದ ಸೋಮವಾರ ಶಿವಮೊಗ್ಗಕ್ಕೆ ವಾಪಸ್ ಬರುತ್ತೇವೆ. ಯಾವುದೇ ಆತಂಕ ಬೇಡ ಎಂದು ಸುರೇಖಾ ಮುರಳೀಧರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...