alex Certify ಆಪರೇಷನ್​ ಗಂಗಾ ಕಾರ್ಯಾಚರಣೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆ ನೆರವು ಕೋರಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಪರೇಷನ್​ ಗಂಗಾ ಕಾರ್ಯಾಚರಣೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆ ನೆರವು ಕೋರಿದ ಪ್ರಧಾನಿ ಮೋದಿ

ಯುದ್ಧಪೀಡಿತ ಉಕ್ರೇನ್​​ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಹಾಯ ಮಾಡುವಂತೆ ಪ್ರಧಾನಿ ಮೋದಿ ಭಾರತೀಯ ವಾಯುಪಡೆಯನ್ನು ಕೋರಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ನಮ್ಮ ವಾಯುಪಡೆಯ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳುವುದರಿಂದ ಕಡಿಮೆಯ ಸಮಯದಲ್ಲಿ ನಾವು ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು ಎಂಬ ನಂಬಿಕೆಯಿದೆ. ಅಲ್ಲದೇ ಇದು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಭಾರತೀಯ ವಾಯುಪಡೆಯು ಇಂದಿನಿಂದ ಆಪರೇಷನ್ ಗಂಗಾದ ಭಾಗವಾಗಿ ಹಲವಾರು C-17 ವಿಮಾನಗಳನ್ನು ನಿಯೋಜಿಸುವ ನಿರೀಕ್ಷೆಯಿದೆ.

ಇಂದು ಮುಂಜಾನೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್​​ ತನ್ನ ವಾಯುಪ್ರದೇಶವನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ವಿಮಾನವು ರೋಮೇನಿಯನ್​ ರಾಜಧಾನಿ ಬುಕಾರೆಸ್ಟ್​ನಿಂದ ಹೊರಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...