alex Certify ಆಮ್ಲೆಟ್ ಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಮ್ಲೆಟ್ ಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ತುಮಕೂರು: ಆಮ್ಲೆಟ್ ಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಹುಲಿಯೂರುದುರ್ಗ ಡಿ. ಹೊಸಹಳ್ಳಿಯಲ್ಲಿ ನಡೆದಿದ್ದು, ಅಂಜನಪ್ಪ ಎಂಬ ವ್ಯಕ್ತಿಯೇ ಕೊಲೆಯಾಗಿದ್ದಾನೆ.

ಕೊಲೆ ಮಾಡಿರುವ ಗಂಗರಾಜು ಹಾಗೂ ಅಂಜನಪ್ಪ ಇಬ್ಬರು ಸೇರಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಮ್ಲೆಟ್ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಆ ಸಂದರ್ಭದಲ್ಲಿ ಅಂಜನಪ್ಪ ಮಚ್ಚಿನಿಂದ ಗಂಗರಾಜು ಮೇಲೆ ಹಲ್ಲೆ ನಡೆಸಿದ್ದಾನೆ.

ಘಟನೆಯಲ್ಲಿ ಗಾಯಗೊಂಡಿದ್ದ ಗಂಗರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಆ ನಂತರ ಹೇಗಾದರೂ ಮಾಡಿ ಅಂಜನಪ್ಪನನ್ನು ಮುಗಿಸಬೇಕು ಎಂದು ಸಂಚು ರೂಪಿಸಿದ್ದಾನೆ. ಆಗ ಆತನಿಗೆ ಸ್ನೇಹಿತ ವಿಜಯಕುಮಾರ್ ಸಹಾಯ ಮಾಡಲು ಮುಂದಾಗಿದ್ದಾನೆ.

ಸೈಕಲ್ ನಲ್ಲಿ ತೆರಳುತ್ತಿದ್ದ ಅಂಜನಪ್ಪನನ್ನು ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ನಂತರ ಮೃತ ದೇಹವನ್ನು ಕೆರೆಗೆ ಎಸೆದು ಪರಾರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ, ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಗಂಗರಾಜು(26) ಹಾಗೂ ವಿಜಯಕುಮಾರ್(25) ಎಂಬುವವರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...