alex Certify ಆಯುಧ ಪೂಜೆಯಂದು ಭಜರಂಗದಳದಿಂದ ಮಾರಕಾಸ್ತ್ರಗಳಿಗೆ ಪೂಜೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯುಧ ಪೂಜೆಯಂದು ಭಜರಂಗದಳದಿಂದ ಮಾರಕಾಸ್ತ್ರಗಳಿಗೆ ಪೂಜೆ…!

ಆಯುಧ ಪೂಜೆಯಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದು, ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತುಮಕೂರಿನ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಈ ಪೂಜೆ ನಡೆದಿದೆ ಎನ್ನಲಾಗಿದ್ದು, ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.

ಪೂಜೆಯಲ್ಲಿ ಲಾಂಗ್, ಕತ್ತಿ, ಏರ್ ಗನ್ ಮೊದಲಾದವುಗಳನ್ನು ಇರಿಸಿ ಪೂಜೆ ಸಲ್ಲಿಸಲಾಗಿದ್ದು, ಇವುಗಳನ್ನು ಯಾರು ಬಳಸುತ್ತಿದ್ದರು ? ವಿಡಿಯೋ ನೋಡಿಯೂ ಪೊಲೀಸರು ಸುಮ್ಮನಿರುವುದು ಏಕೆ ಎಂಬ ಪ್ರಶ್ನೆಗಳನ್ನು ಕೆಲ ನೆಟ್ಟಿಗರು ಕೇಳಿದ್ದಾರೆ.

ಈ ಹಿಂದೆ ಹುಟ್ಟುಹಬ್ಬದ ಸಂದರ್ಭದಲ್ಲಿ ಕೆಲವರು ಲಾಂಗ್ ನಿಂದ ಕೇಕ್ ಕತ್ತರಿಸಿದ ವೇಳೆ ಪ್ರಕರಣ ದಾಖಲಿಸಿದ ಉದಾಹರಣೆಗಳಿದ್ದು, ಆದರೆ ಈಗ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...