alex Certify ಆಸ್ತಿ ಕಲಹ: ಸಹೋದರನ ಹತ್ಯೆಗೈದು ಅಣ್ಣ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಕಲಹ: ಸಹೋದರನ ಹತ್ಯೆಗೈದು ಅಣ್ಣ ಪರಾರಿ

ಅಣ್ಣ – ತಮ್ಮಂದಿರ ನಡುವೆ ನಡೆಯುತ್ತಿದ್ದ ಆಸ್ತಿ ಕಲಹ ವಿಕೋಪಕ್ಕೆ ತಿರುಗಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.

ಗೋವಿಂದ ಮೃತಪಟ್ಟ ದುರ್ದೈವಿಯಾಗಿದ್ದು, ಆತನನ್ನು ಮಾರಣಾಂತಿಕವಾಗಿ ಥಳಿಸಿದ್ದ ಸಹೋದರ ರಂಗಸ್ವಾಮಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಗೋವಿಂದನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡ ಕವಲಂದೆ ಪೊಲೀಸರು ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...