alex Certify ಇಂದಿನಿಂದ ಬೆಳ್ಳಿತೆರೆಯಲ್ಲಿ ವಿಜಯ ಸಂಕೇಶ್ವರ್ ಜೀವನಾಧಾರಿತ ಚಿತ್ರ ‘ವಿಜಯಾನಂದ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಬೆಳ್ಳಿತೆರೆಯಲ್ಲಿ ವಿಜಯ ಸಂಕೇಶ್ವರ್ ಜೀವನಾಧಾರಿತ ಚಿತ್ರ ‘ವಿಜಯಾನಂದ’

ಖ್ಯಾತ ಉದ್ಯಮಿ ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ್ ಜೀವನಧಾರಿತ ಚಿತ್ರ ‘ವಿಜಯಾನಂದ’ ಇಂದು ಬಿಡುಗಡೆಯಾಗಿದ್ದು, ಭಾರತದ 1000 ಹಾಗೂ ವಿದೇಶದ 200 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಕನ್ನಡಿಗರೊಬ್ಬರ ಮೊಟ್ಟಮೊದಲ ಪಾನ್ ಇಂಡಿಯಾ ಬಯೋಪಿಕ್ ಎಂಬ ಹೆಗ್ಗಳಿಕೆಗೆ ‘ವಿಜಯಾನಂದ’ ಚಿತ್ರ ಪಾತ್ರವಾಗಿದ್ದು, ಕೇವಲ ಒಂದು ಟ್ರಕ್ ನಿಂದ ಆರಂಭವಾದ ವಿ ಆರ್ ಎಲ್ ಲಾಜಿಸ್ಟಿಕ್ ಇಂದು ಭಾರತದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ಬೆಳೆದ ಯಶೋಗಾಥೆಯನ್ನು ಪ್ರೇಕ್ಷಕರ ಮುಂದೆ ತೆರೆದಿಡಲಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ತೆರೆಕಂಡಿರುವ ಈ ಚಿತ್ರದಲ್ಲಿ ಹಿರಿಯ ನಟ ಅನಂತನಾಗ್, ರವಿಚಂದ್ರನ್, ವಿನಯ ಪ್ರಸಾದ್, ಪ್ರಕಾಶ್ ಬೆಳವಾಡಿ, ನಿಹಾಲ್, ಸಿರಿ ಪ್ರಹ್ಲಾದ್, ಶೈನ್ ಶೆಟ್ಟಿ, ಭರತ್ ಬೋಪಣ್ಣ, ಅರ್ಚನಾ ಕೊಟ್ಟಿಗೆ, ರಮೇಶ್ ಭಟ್, ದಯಾಳ್ ಪದ್ಮನಾಭ ಸೇರಿದಂತೆ ಹಲವು ದಿಗ್ಗಜರು ನಟಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...