alex Certify ಇಂದು ಉರುಳಲಿದೆಯಾ ಬಿಜೆಪಿಯ ಮತ್ತೊಂದು ವಿಕೆಟ್ ? ಸ್ಪೋಟಕ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಉರುಳಲಿದೆಯಾ ಬಿಜೆಪಿಯ ಮತ್ತೊಂದು ವಿಕೆಟ್ ? ಸ್ಪೋಟಕ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಪ್ರಕಟಿಸಿದ ಬಳಿಕ ಟಿಕೆಟ್ ವಂಚಿತರ ಅಸಮಾಧಾನ ಮುಗಿಲು ಮುಟ್ಟಿದ್ದು, ಒಬ್ಬೊಬ್ಬರಾಗಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಭಿನ್ನಮತ ಭುಗಿಲೆದ್ದಿದೆ.

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಕುಮಟಳ್ಳಿ ಪಾಲಾದ ಕಾರಣಕ್ಕೆ ಸಿಡಿದೆದ್ದಿರುವ ಲಕ್ಷ್ಮಣ ಸವದಿ, ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಇಂದು ಸಂಜೆ ಒಳಗಾಗಿ ಕಾಂಗ್ರೆಸ್ ಸೇರ್ಪಡೆಗೊಂಡು ಅಥಣಿ ಕ್ಷೇತ್ರದ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ.

ಇದರ ಮಧ್ಯೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಹಾಲಿ ಶಾಸಕ ಅನಿಲ್ ಬೆನಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ವಿರುದ್ಧ ಬಂಡೆದ್ದಿರುವ ಪ್ರಭಾವಿ ನಾಯಕರುಗಳನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಮುಂದಾಗಿದ್ದು, ಹೀಗಾಗಿ ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಬಹುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...