alex Certify ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಏಕದಿನ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಏಕದಿನ ಪಂದ್ಯ

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದ್ದು, ಇಂದು ಎರಡನೇ ಪಂದ್ಯಕ್ಕೆ ಸಿದ್ದವಾಗಿದೆ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಶತಕ ಹಾಗೂ ನಾಯಕ ರೋಹಿತ್ ಶರ್ಮ, ಶುಬ್ಮನ್ ಗಿಲ್ ಅವರ ಅರ್ಧ ಶತಕದ ಸಹಾಯದಿಂದ 373ರನ್ ಗಳ ಬೃಹತ್ ಮೊತ್ತ ದಾಖಲಿಸಿತ್ತು.

ಶ್ರೀಲಂಕಾ ತಂಡದ ನಾಯಕ ದಾಸುನ್ ಶನಾಕ ಏಕಾಂಗಿ ಹೋರಾಟ ನಡೆಸಿದರೂ ಗೆಲುವು ಸಾಧ್ಯವಾಗಿರಲಿಲ್ಲ ದಾಸುನ್ ಶನಾಕ ಅವರ ಬ್ಯಾಟಿಂಗ್ ಗೆ ಸಾಕಷ್ಟು ಕ್ರಿಕೆಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಇಂದು ನಡೆಯಲಿರುವ ಎರಡನೇ ಪಂದ್ಯವನ್ನು ಶ್ರೀಲಂಕಾ ಗೆಲ್ಲಲೇಬೇಕಾಗಿದೆ. ಮೂರು ಏಕದಿನ ಪಂದ್ಯದಲ್ಲಿ ಈಗಾಗಲೇ ಒಂದು ಪಂದ್ಯವನ್ನು ಜಯ ಸಾಧಿಸಿರುವ ಭಾರತ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಹುಮ್ಮಸ್ಸಿನಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...