alex Certify ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತು; ಕಾಲವೇ ಉತ್ತರ ಕೊಡುತ್ತೆ; ವಿಡಿಯೋ ಬಿಡುಗಡೆ ಮಾಡಿದ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತು; ಕಾಲವೇ ಉತ್ತರ ಕೊಡುತ್ತೆ; ವಿಡಿಯೋ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ಬೆಂಗಳೂರು: ಇಂದು ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ರದ್ದಾಗಿದ್ದು, ನಾಳೆ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಆಕ್ರೋಶಗೊಂಡಿರುವ ಕಿಚ್ಚನ ಅಭಿಮಾನಿಗಳು ಹಲವೆಡೆ ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಈ ನಡುವೆ ವಿಡಿಯೋ ಬಿಡುಗಡೆ ಮಾಡಿದ್ದ ನಿರ್ಮಾಪಕ ಸೂರಪ್ಪ ಬಾಬು, ಇಂದು ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ರಿಲೀಸ್ ಆಗದಿರಲು ಹಲವು ಕಾರಣಗಳಿವೆ, ಇದರಲ್ಲಿ ನನ್ನ ತಪ್ಪಿಲ್ಲ, ವಿತರಕರಿಂದ ಕೋಟ್ಯಂತರ ರೂಪಾಯಿ ವಂಚನೆಯಾಗಿದೆ. ಎಲ್ಲದರ ಹಿಂದೆ ಷಡ್ಯಂತ್ರ ನಡೆದಿದೆ. ಸತ್ಯ ಏನೆಂಬುದು ಕಿಚ್ಚ ಸುದೀಪ್ ಅವರಿಗೂ ಗೊತ್ತು ಎಂದು ಹೇಳಿದ್ದರು ಅಲ್ಲದೇ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದರು. ನಿರ್ಮಾಪಕರ ಹೇಳಿಕೆ ಬೆನ್ನಲ್ಲೇ ಇದೀಗ ವಿಡಿಯೋ ಬಿಡುಗಡೆ ಮಾಡಿರುವ ಕಿಚ್ಚ ಸುದೀಪ್, ನಾಳೆ ಎಲ್ಲಾ ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ-3 ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

13 ಅಂತಸ್ತಿನ ಕಟ್ಟಡಲ್ಲಿ ಭಾರಿ ಬೆಂಕಿ, ಅಗ್ನಿ ಅನಾಹುತದಲ್ಲಿ 46 ಜನ ಸಾವು

ಟ್ವಿಟರ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಕಿಚ್ಚ ಸುದೀಪ್, ಸೂರಪ್ಪ ಬಾಬು ಅವರ ವಿಡಿಯೋ ನಾನು ನೋಡಿದೆ. ಬಾಬು ಅವರು ಒಬ್ಬರೇ ಅಲ್ಲ, ಜಾಕ್ ಮಂಜು ಸೇರಿದಂತೆ ಹಲವರಿಗೆ ತೊಂದರೆಯಾಗಿದೆ. ಯಾರಿಂದ ನೀವು ಈ ತೊಂದರೆಯಲ್ಲಿ ಸಿಲುಕಿಕೊಂಡಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಅದಕ್ಕೆ ಕಾಲವೇ ಉತ್ತರವನ್ನು ಕೊಡುತ್ತೆ. ನಿಮ್ಮ ಜೊತೆಗೆ ನಾವಿದ್ದೇವೆ. ಸಿನಿಮಾ ನಾಳೆಯಿಂದ ಭರ್ಜರಿ ಪ್ರದರ್ಶನ ಕಾಣುತ್ತೆ. ಈ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ. ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳಬೇಡಿ. ಇದರಲ್ಲಿ ಥಿಯೇಟರ್ ಮಾಲೀಕರ ತಪ್ಪಿಲ್ಲ. ಯಾವುದೇ ಕಾರಣಕ್ಕೂ ಥಿಯೇಟರ್ ಗಳಿಗೆ ಹಾನಿಯಾಗುವಂತೆ ದುಡುಕಬಾರದು. ಅಭಿಮಾನಿಗಳ ನಿರೀಕ್ಷೆ, ಪ್ರೀತಿಗಳಿಗೆ ಧನ್ಯವಾದ. ನಾಳೆ ಚಿತ್ರ ಬಿಡುಗಡೆಯಾಗಲಿದೆ. ಒಂದು ದಿನ ಆಗಿರುವ ಸಮಸ್ಯೆಗೆ ವಿಷಾದವಿರಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...