alex Certify ಇದು ಬಿಜೆಪಿ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ; ವಿಡಿಯೋ ಮೂಲಕ ತಿರುಗೇಟು ನೀಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಬಿಜೆಪಿ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ; ವಿಡಿಯೋ ಮೂಲಕ ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ನಾಯಕರ ಪದ ಬಳಕೆ ವಿಚಾರವಾಗಿ ಕಿಡಿಕಾರಿರುವ ಕಾಂಗ್ರೆಸ್, ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ ಎಂದು ವಾಗ್ದಾಳಿ ನಡೆಸಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ರಮೇಶ್ ಜಾರಕಿಹೊಳಿ ನೀಡಿದ್ದ ಪ್ರತಿಕ್ರಿಯೆಯ ವಿಡಿಯೋ ಶೇರ್ ಮಾಡಿ ಟ್ವಿಟರ್ ನಲ್ಲಿ ಕಿಡಿಕಾರಿರುವ ಕಾಂಗ್ರೆಸ್, ಮಾಜಿ ಶಾಸಕ ಸಂಜಯ್ ಪಾಟೀಲ್, ರಮೇಶ್ ಜಾರಕಿಹೊಳಿ ಅವರುಗಳು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವ ಪದಗಳು ಬಿಜೆಪಿಯ ಬೌದ್ಧಿಕ ದಿವಾಳಿ ತನಕ್ಕೆ ಸಾಕ್ಷಿ ಎಂದು ಹೇಳಿದೆ.

ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ ಎಂಬ ಮಾತಿನ ಅರ್ಥವನ್ನು ಬಿಜೆಪಿ ನಾಯಕರು ಮೊದಲು ತಿಳಿಯಲಿ ಎಂದು ಚಾಟಿ ಬೀಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...