alex Certify ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ

ಬೆಂಗಳೂರು: ಕೊರೊನಾ ಮಾಹಾಮಾರಿ ಕುಟುಂಬಗಳನ್ನೇ ಬಲಿ ಪಡೆಯುತ್ತಿದ್ದು, ರಾಜ್ಯದಲ್ಲಿ ಕೋವಿಡ್ ಹಾಗೂ ಕೋವಿಡ್ ನಂತರದ ಸಾವಿನ ಸರಣಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಕೊರೊನಾ ಸೋಂಕಿಗೆ ಪತ್ನಿ ಬಲಿಯಾದ ಬೆನ್ನಲ್ಲೇ ಇದೀಗ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ.

ನಾಗರಾಜ್ (45) ಹಾಗೂ ಮಕ್ಕಳಾದ ಕೀರ್ತಿ (18), ಮೋನಿಷಾ (14) ಆತ್ಮಹತ್ಯೆಗೆ ಶರಣಾದವರು. ಕೆಲ ದಿನಗಳ ಹಿಂದೆ ನಾಗರಾಜ್ ಪತ್ನಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅಮ್ಮನ ಅಗಲಿಕೆಯಿಂದ ಮಕ್ಕಳಿಬ್ಬರು ಮಾನಸಿಕವಾಗಿ ನೊಂದಿದ್ದರೆ, ಅಪ್ಪ ನಾಗರಾಜ್ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೀಗ ತಂದೆ ಹಾಗೂ ಇಬ್ಬರು ಮಕ್ಕಳು ನೇಣಿಗೆ ಕೊರಳೊಡ್ಡಿದ್ದಾರೆ.

ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...