alex Certify ಇಬ್ರಾಹಿಂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಗಮಿಸುತ್ತಿದ್ದಾರೆ; ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ರಾಹಿಂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಗಮಿಸುತ್ತಿದ್ದಾರೆ; ಕುಮಾರಸ್ವಾಮಿ

ರಾಮನಗರ : ಸಿಎಂ ಇಬ್ರಾಹಿಂ ಅವರು ಮಾಜಿ ಪ್ರಧಾನಿ ದೇವೇಗೌಡರ ಸಿದ್ಧಾಂತ ಒಪ್ಪಿ ಬೆಳೆದವರು. ಈಗ ಮರಳಿ ನಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಮ್ಮೆ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ. ಹೀಗಾಗಿ ಸಿ.ಎಂ. ಇಬ್ರಾಹಿಂ ಅವರು ಮರಳಿ ಗೂಡು ಸೇರುತ್ತಿದ್ದಾರೆ. ದೇವೇಗೌಡರ ಕನಸಿನಂತೆ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಸದ್ಯದ ರಾಜಕೀಯ ಸನ್ನಿವೇಶದಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬರುವ ಅವಶ್ಯಕತೆ ಹೆಚ್ಚಾಗಿದ್ದು, ಪಕ್ಷದ ಸಿದ್ಧಾಂತ ಮೆಚ್ಚಿ ಬಂದವರಿಗೆ ಸ್ವಾಗತ ಕೋರುತ್ತೇವೆ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ನ ಹಲವರು ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ ಹೇಳಿಕೆ ಕುರಿತು ಮಾತನಾಡಿದ ಅವರು, ಯಾರೇ ಪಕ್ಷ ತೊರೆದರೂ ನಮಗೆ ಚಿಂತೆ ಇಲ್ಲ. ನಮ್ಮಲ್ಲಿ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ. ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವ ಶಕ್ತಿ ಅವರಲ್ಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...