alex Certify ಇವಿಗಳಲ್ಲಿ ಬೆಂಕಿ: ಕಂಪನಿಗಳಿಗೆ ಗಡ್ಕರಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇವಿಗಳಲ್ಲಿ ಬೆಂಕಿ: ಕಂಪನಿಗಳಿಗೆ ಗಡ್ಕರಿ ಎಚ್ಚರಿಕೆ

ನವದೆಹಲಿ: ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರುವ ವಾಹನ ಉತ್ಪಾದಕರ ವಿರುದ್ಧ ಕೇಂದ್ರ ಸರ್ಕಾರವು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಯಾವುದೇ ಕಂಪನಿ ತನ್ನ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುವುದು. ಹಾಗೂ ದೋಷಪೂರಿತ ವಾಹನಗಳನ್ನು ವಾಪಸ್ ಕರೆಸಿ, ಅದರ ಬಿಡಿಭಾಗಗಳನ್ನು ಬದಲಿಸಿ ಗ್ರಾಹಕರಿಗೆ ನೀಡುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ.

ಪ್ರತಿಯೊಬ್ಬ ಪ್ರಯಾಣಿಕ ಹಾಗೂ ಸವಾರನ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ. ಆದರೆ, ಕಳೆದ ಎರಡು ತಿಂಗಳಿಂದ ಕೆಲವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ ದೋಷ ಕಾಣಸಿಕೊಂಡು ಅಗ್ನಿ ಅವಘಡಗಳು ಸಂಭವಿಸಿವೆ. ಕೆಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ, ಇನ್ನೂ ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ. ನಿವಾರಣೋಪಾಯಗಳ ಕುರಿತು ಅದು ಶಿಫಾರಸುಗಳನ್ನು ನೀಡಲಿದೆ.

ಇವುಗಳ ಆಧಾರದಲ್ಲಿ ತಪ್ಪು ಮಾಡಿರುವ ಕಂಪನಿಗಳಿಗೆ ಅಗತ್ಯ ಆದೇಶಗಳನ್ನು ನೀಡಲಾಗುವುದು. ಅಲ್ಲದೆ, ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ ಕೇಂದ್ರಿತ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ನೀಡಲಿದ್ದೇವೆ ಎಂದು ಸಚಿವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...