ಈಗಲೇ ಯಾವುದನ್ನೂ ಹೇಳಲಾಗದು; ಲೋಕಾ ದಾಳಿ ಕುರಿತು ಗೃಹ ಸಚಿವರ ಪ್ರತಿಕ್ರಿಯೆ

ಶಿವಮೊಗ್ಗ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಈಗಲೇ ಯಾವುದೂ ಹೇಳಲು ಆಗದು ಎಂದಿದ್ದಾರೆ.

ಲೋಕಾಯುಕ್ತ ದಾಳಿ ಕುರಿತು ಮಾದ್ಯಮಗಳ ಮೂಲಕ ನನಗೆ ತಿಳಿದಿದೆ. ಈ ವಿಚಾರ ಈಗ ವಿಚಾರಣೆ ಹಂತದಲ್ಲಿದೆ. ಈ ಬಗ್ಗೆ ನಾನು ಈಗಲೇ ಪ್ರತಿಕ್ರಿಯಿಸುವುದಿಲ್ಲ. ನಾಲ್ಕೈದು ಜನರನ್ನು ಅರೆಸ್ಟ್ ಮಾಡಿದ್ದಾರೆ ಎಂದಿದ್ದಾರೆ.

ಯಾವ ಹಣ ಅವರು ಇಟ್ಟುಕೊಂಡಿದ್ದರು ಎಂದು ತಿಳಿದಿಲ್ಲ. ವಿಚಾರಣೆ ಬಳಿಕ ಈ ಬಗ್ಗೆ ತಿಳಿಯಲಿದೆ ಎಂದರು. ನಿನ್ನೆ ಮಾಡಾಳ್ ವಿರೂಪಾಕ್ಷಪ್ಪನವರ ದ್ವಿತೀಯ ಪುತ್ರ ಪ್ರಶಾಂತ್ ಮಾಡಾಳ್ ರಾಸಾಯನಿಕ ಟೆಂಡರ್ ವಿಚಾರದಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read