alex Certify ಈಗಲೇ ಯಾವುದನ್ನೂ ಹೇಳಲಾಗದು; ಲೋಕಾ ದಾಳಿ ಕುರಿತು ಗೃಹ ಸಚಿವರ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಗಲೇ ಯಾವುದನ್ನೂ ಹೇಳಲಾಗದು; ಲೋಕಾ ದಾಳಿ ಕುರಿತು ಗೃಹ ಸಚಿವರ ಪ್ರತಿಕ್ರಿಯೆ

ಶಿವಮೊಗ್ಗ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಈಗಲೇ ಯಾವುದೂ ಹೇಳಲು ಆಗದು ಎಂದಿದ್ದಾರೆ.

ಲೋಕಾಯುಕ್ತ ದಾಳಿ ಕುರಿತು ಮಾದ್ಯಮಗಳ ಮೂಲಕ ನನಗೆ ತಿಳಿದಿದೆ. ಈ ವಿಚಾರ ಈಗ ವಿಚಾರಣೆ ಹಂತದಲ್ಲಿದೆ. ಈ ಬಗ್ಗೆ ನಾನು ಈಗಲೇ ಪ್ರತಿಕ್ರಿಯಿಸುವುದಿಲ್ಲ. ನಾಲ್ಕೈದು ಜನರನ್ನು ಅರೆಸ್ಟ್ ಮಾಡಿದ್ದಾರೆ ಎಂದಿದ್ದಾರೆ.

ಯಾವ ಹಣ ಅವರು ಇಟ್ಟುಕೊಂಡಿದ್ದರು ಎಂದು ತಿಳಿದಿಲ್ಲ. ವಿಚಾರಣೆ ಬಳಿಕ ಈ ಬಗ್ಗೆ ತಿಳಿಯಲಿದೆ ಎಂದರು. ನಿನ್ನೆ ಮಾಡಾಳ್ ವಿರೂಪಾಕ್ಷಪ್ಪನವರ ದ್ವಿತೀಯ ಪುತ್ರ ಪ್ರಶಾಂತ್ ಮಾಡಾಳ್ ರಾಸಾಯನಿಕ ಟೆಂಡರ್ ವಿಚಾರದಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...