alex Certify ಈಶ್ವರಪ್ಪರ ರಾಜೀನಾಮೆ ಸರಿ, ಬಂಧನವೇಕೆ……? ಕಾಂಗ್ರೆಸ್​ಗೆ ಹೆಚ್​ಡಿಕೆ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶ್ವರಪ್ಪರ ರಾಜೀನಾಮೆ ಸರಿ, ಬಂಧನವೇಕೆ……? ಕಾಂಗ್ರೆಸ್​ಗೆ ಹೆಚ್​ಡಿಕೆ ಪ್ರಶ್ನೆ

ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.​ ಈಶ್ವರಪ್ಪ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಅವರ ಬಂಧನದ ಬಗ್ಗೆ ಹೋರಾಟವೇಕೆ ಎಂದು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಕಾಂಗ್ರೆಸ್​ನ್ನು ಪ್ರಶ್ನಿಸಿದ್ದಾರೆ.

ವಿಜಯಪುರದ ಆಲಮಟ್ಟಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ನಾನು ಆಗ್ರಹಿಸಿದ್ದೆ. ಅದರಂತೆ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಆದರೆ ಇಲ್ಲಿ ಅವರ ಬಂಧನವೇಕೆ ಆಗಬೇಕು ಎಂದು ಹೆಚ್​​ಡಿಕೆ ಪ್ರಶ್ನಿಸಿದ್ದಾರೆ.

ಈಶ್ವರಪ್ಪ ಪರ್ಸಂಟೇಜ್​ ದಂಧೆ ನಡೆಸುತ್ತಾರೆಂದು ಬೀದಿಗಿಳಿದ ಕಾಂಗ್ರೆಸ್​ ಧರ್ಮ ಧರ್ಮಗಳ ನಡುವೆ ಸಂಘರ್ಷ ನಡೆಯುವಾಗ ಏಕೆ ಬೀದಿಗಿಳಿಯಲಿಲ್ಲ..? ಆಗ ಕಾಂಗ್ರೆಸ್​ ಮೌನಕ್ಕೆ ಶರಣಾಗಿದ್ದೇಕೆ..? ಈಗ ಸಿದ್ದರಾಮಯ್ಯ ಪರ್ಸಂಟೇಜ್​ ಬಗ್ಗೆ ಮಾತನಾಡ್ತಾರೆ. ಆಗ ಸಿದ್ದರಾಮಯ್ಯ ಅವಧಿಯಲ್ಲಿ ಸರ್ಕಾರದ ನಡವಳಿಕೆಗೆ ಬೇಸತ್ತು ಕಲ್ಲಪ್ಪ ಹಂಡಿ ಭಾಗ ಆತ್ಮಹತ್ಯೆ ಮಾಡಿಕೊಂಡರು. ಆಗೇಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ ಎಂದು ಪ್ರಶ್ನಿಸಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...