alex Certify ಈ ಚುನಾವಣೆ ಅಭಿವೃದ್ಧಿ ಹಾಗೂ ಪಾಪದ ಹಣದ ಮಧ್ಯೆ ನಡೆಯುತ್ತಿರುವ ಫೈಟ್; ಕಾಂಗ್ರೆಸ್ ವಿರುದ್ಧ ಸಚಿವ ವಿ.ಸೋಮಣ್ಣ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಚುನಾವಣೆ ಅಭಿವೃದ್ಧಿ ಹಾಗೂ ಪಾಪದ ಹಣದ ಮಧ್ಯೆ ನಡೆಯುತ್ತಿರುವ ಫೈಟ್; ಕಾಂಗ್ರೆಸ್ ವಿರುದ್ಧ ಸಚಿವ ವಿ.ಸೋಮಣ್ಣ ವಾಗ್ದಾಳಿ

ಬಿಜೆಪಿ ಮೇಲೆ ಮುನಿಸಿಕೊಂಡ ವಿ.ಸೋಮಣ್ಣ - Eesanje News

ಬೆಂಗಳೂರು: ಗೋವಿಂದರಾಜನಗರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸವೇ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ನಿಂತಿರುವ ಅಪ್ಪ-ಮಗನ ಕೊಡುಗೆ ಶೂನ್ಯ. ಅಪ್ಪನೂ 15 ವರ್ಷ ಏನೂ ಮಾಡಿಲ್ಲ, ಮಗನೂ 9 ವರ್ಷ ಏನೂ ಮಾಡಿಲ್ಲ. ಈಗ ಮತ್ತೆ ಬಂದಿದ್ದಾರೆ. ಕಾಂಗ್ರೆಸ್ ಇಂತವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಕೃಷ್ಣಪ್ಪ ಹಾಗೂ ಪ್ರಿಯಾಕೃಷ್ಣ ವಿರುದ್ಧ ಸೋಮಣ್ಣ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಈ ಚುನಾವಣೆ ಅಭಿವೃದ್ಧಿ ಹಾಗೂ ಪಾಪದ ಹಣದ ಮಧ್ಯೆ ನಡೆಯುತ್ತಿದೆ. ಅಪ್ಪ-ಮಕ್ಕಳು ಸಾವಿರಾರು ಜನರಿಗೆ ವಂಚನೆ ಮಾಡಿದ್ದಾರೆ ತಾವರೆಕೆರೆಯಿಂದ ಹಿಡಿದು ದೊಡ್ಡಆಲದ ಮರದವರೆಗೂ ಹೋದರೆ ಇವರ ಬಣ್ಣ ಬಯಲಾಗುತ್ತದೆ. ಅಂತವರಿಗೆ ಕಾಂಗ್ರೆಸ್ ಮಣೆ ಹಾಕಿ ಅಭ್ಯರ್ಥಿಗಳನ್ನಾಗಿ ಮಾಡಿದೆ. ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...