alex Certify ಈ ರಾಶಿಯವರಿಗಿದೆ ಇಂದು ಮಕ್ಕಳಿಂದ ಶುಭ ವಾರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗಿದೆ ಇಂದು ಮಕ್ಕಳಿಂದ ಶುಭ ವಾರ್ತ

ಮೇಷ: ಸಾಂಸಾರಿಕ ಜೀವನದಲ್ಲಿ ಖರ್ಚು ವೆಚ್ಚಗಳು ಹೆಚ್ಚಾಗಲಿದೆ. ಕಚೇರಿ ಕೆಲಸದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಮಕ್ಕಳಿಂದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಪೋಷಕರ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ.

ವೃಷಭ: ಆರೋಗ್ಯ ಕೈಕೊಡೋದ್ರಿಂದ ಕಿರಿಕಿರಿ ಅನುಭವಿಸಲಿದ್ದೀರಿ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ. ಹಿತಶತ್ರುಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ಮಿಥುನ: ಕೆಲಸಕ್ಕೆ ತೆರಳುವ ಮುನ್ನ ಎಲ್ಲಾ ದಾಖಲೆಗಳನ್ನು ತಯಾರು ಮಾಡಿಟ್ಟುಕೊಳ್ಳಿ. ಇಲ್ಲವಾದಲ್ಲಿ ಮೇಲಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಲಿದ್ದೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಹುಡುಕಿಕೊಂಡು ಬರಲಿದೆ. ಮಕ್ಕಳಿಂದ ಶುಭ ವಾರ್ತ ಕೇಳುತ್ತೀರಿ.

ಕಟಕ : ಮನೆಯ ಕಿರಿಯ ಸದಸ್ಯರು ಶುಭವಾರ್ತೆಯನ್ನು ಹೊತ್ತು ತರಲಿದ್ದಾರೆ. ವೈವಾಹಿಕ ಸಂಬಂಧಕ್ಕಾಗಿ ಹುಡುಕಾಡುತ್ತಿರುವವರಿಗೆ ಕಂಕಣ ಭಾಗ್ಯವಿದೆ. ವೃತ್ತಿ ರಂಗದಲ್ಲಿ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ಸಾಗಲಿದೆ. ದಿನಾಂತ್ಯದಲ್ಲಿ ಶುಭ ಸುದ್ದಿ ಕಾದಿದೆ.

ಸಿಂಹ : ವಿದ್ಯಾರ್ಥಿಗಳಿಗೆ ಓದಿನಲ್ಲಿ ಹಿನ್ನಡೆ ಉಂಟಾಗಲಿದೆ. ಲೌಕಿಕ ಜೀವನದಿಂದ ಆಧ್ಯಾತ್ಮದ ಕಡೆಗೆ ಒಲವು ತೋರಲಿದ್ದೀರಿ. ಮನೆಯಲ್ಲಿ ಶುಭ ಕಾರ್ಯ ನಡೆಯುವ ಮುನ್ಸೂಚನೆ ಸಿಗಲಿದೆ. ಆರ್ಥಿಕ ಸ್ಥಿತಿ ಸಾಮಾನ್ಯವಾಗಿ ಇರಲಿದೆ. ಬೆನ್ನು ನೋವಿನ ಸಮಸ್ಯೆ ನಿಮ್ಮನ್ನು ಭಾದಿಸಲಿದೆ.

ಕನ್ಯಾ: ವೃತ್ತಿರಂಗದಲ್ಲಿ ದೊಡ್ಡ ಬದಲಾವಣೆಯ ಪರ್ವಕ್ಕೆ ನೀವು ಸಾಕ್ಷಿಯಾಗುತ್ತೀರಿ. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ತಾಳ್ಮೆಯಿಂದ ಪರಿಸ್ಥಿತಿಯನ್ನು ನಿಭಾಯಿಸಿ. ಸರ್ಕಾರಿ ಕೆಲಸ ಕಾರ್ಯಗಳು ಸಾಂಘವಾಗಿ ನಡೆಯಲಿದೆ.

ತುಲಾ: ನಿರುದ್ಯೋಗಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಂಡಲ್ಲಿ ಒಳ್ಳೆಯದು. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ದಾಯಾದಿಯ ಜೊತೆಗೆ ಕಲಹ ಮುಂದುವರಿಯಲಿದೆ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಶುಭ ವಾರ್ತೆ ಕಾದಿದೆ.

ವೃಶ್ಚಿಕ : ಕಚೇರಿ ಕೆಲಸದಲ್ಲಿ ಶ್ರದ್ಧೆಯೊಂದಿದ್ದರೆ ಸಾಲದು ತಾಳ್ಮೆ ಕೂಡ ಬೇಕು ಅನ್ನೋದು ತಲೆಯಲ್ಲಿರಲಿ. ಯಾರೊಂದಿಗೂ ಮನಸ್ತಾಪ ಬೇಡ. ಸಂಗಾತಿ ನೀಡುವ ಸಲಹೆಗಳನ್ನು ಆಲಿಸಿ. ಪೋಷಕರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಧನು: ನೀವು ಮಾಡದ ತಪ್ಪಿಗೆ ಅಪವಾದಗಳನ್ನು ಎದುರಿಸಲಿದ್ದೀರಿ. ಮನೆಯಲ್ಲಿ ಶುಭ ಕಾರ್ಯ ಸ್ಥಗಿತವಾಗೋದ್ರಿಂದ ಅಸಮಾಧಾನ ನೆಲಸಲಿದೆ. ಗರ್ಭಿಣಿಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಜವಳಿ ಉದ್ಯಮಿಗಳಿಗೆ ಲಾಭವಿದೆ.

ಮಕರ: ದಾಂಪತ್ಯದಲ್ಲಿ ಇರಿಸು ಮುರಿಸು ಉಂಟಾಗೋದ್ರಿಂದ ನಿಮ್ಮ ನೆಮ್ಮದಿ ಹಾಳಾಗಲಿದೆ. ಮಾನಸಿಕ ಒತ್ತಡ ಹೆಚ್ಚೋದ್ರಿಂದ ಕಚೇರಿ ಕೆಲಸದ ಕಡೆಗೂ ಏಕಾಗ್ರತೆ ಬಾರದು. ಮನೆಯಲ್ಲಿ ಶೀಘ್ರದಲ್ಲೇ ಶುಭಕಾರ್ಯವೊಂದು ನಡೆಯಲಿದೆ. ಮಕ್ಕಳು ನಿಮ್ಮ ನಿರೀಕ್ಷೆಗೆ ತಕ್ಕ ಸಾಧನೆ ತೋರದೇ ನಿಮ್ಮ ಬೇಸರಕ್ಕೆ ಕಾರಣರಾಗಲಿದ್ದಾರೆ.

ಕುಂಭ: ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ಸಾರ್ವಜನಿಕ ಜೀವನದಲ್ಲಿ ರಾಜಕೀಯ ರಂಗದವರಿಗೆ ಉತ್ತಮ ಪ್ರಶಂಸೆ ಕೇಳಿಬರಲಿದೆ. ಸಂಗಾತಿಯ ಇಷ್ಟಕ್ಕೆ ವಿರೋಧವಾಗಿ ನಡೆಯಬೇಕಾದ ಅನಿವಾರ್ಯತೆ ಎದುರಾಗಲಿದೆ. ಕುಲದೇವತೆಯನ್ನು ಆರಾಧಿಸಿ.

ಮೀನ: ಕಚೇರಿ ಕೆಲಸದ ಕಡೆಗೆ ಇನ್ನಷ್ಟು ಗಮನ ನೀಡಲೇಬೇಕು. ಮೇಲಾಧಿಕಾರಿಗಳು ನಿಮ್ಮನ್ನು ಗುರುತಿಸುವಂತ ಸಾಧನೆ ಮಾಡಿ ತೋರಿಸಿ. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಕುಟುಂಬಸ್ಥರ ಬೆಂಬಲ ಸಿಗಲಿದೆ. ಬೆನ್ನು ನೋವಿನ ಸಮಸ್ಯೆಗೆ ಒಳಗಾಗುವಿರಿ. ಧಾರ್ಮಿಕ ವಿಚಾರದತ್ತ ಮನಸ್ಸು ವಾಲಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...