alex Certify ಈ ರಾಶಿಯವರಿಗೆ ಇಂದು ಖುಲಾಯಿಸಲಿದೆ ಅದೃಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗೆ ಇಂದು ಖುಲಾಯಿಸಲಿದೆ ಅದೃಷ್ಟ

 

ಮೇಷ : ಇಂದು ಕಚೇರಿಯಲ್ಲಿ ಒಳ್ಳೆಯ ವಾತಾವರಣ ಇರಲಿದೆ. ನೀವು ಚಟುವಟಿಕೆಯಿಂದ ಇರಲಿದ್ದೀರಿ. ನಿಮ್ಮೆಲ್ಲ ಕೆಲಸಗಳಿಗೆ ಸಂಗಾತಿಯು ಸಾಥ್​ ನೀಡಲಿದ್ದಾರೆ. ಉದ್ಯಮದಲ್ಲಿ ಗಳಿಸಿದ ಲಾಭವನ್ನು ಒಳ್ಳೆಯ ಕಾರ್ಯಕ್ಕೆ ವಿನಿಯೋಗಿಸಲಿದ್ದೀರಿ.

ವೃಷಭ : ಮಕ್ಕಳ ಓದಿನತ್ತ ಹೆಚ್ಚಿನ ಗಮನ ನೀಡಲೇಬೇಕು. ಇಲ್ಲವಾದಲ್ಲಿ ಮಕ್ಕಳು ತುಂಬಾ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ. ದಾಂಪತ್ಯ ಜೀವನವು ಚೆನ್ನಾಗಿ ಇರಲಿದೆ. ಉದ್ಯಮದಲ್ಲಿ ಲಾಭವಿದೆ. ಸಹೋದ್ಯೋಗಿಗಳು ಸಹಾಯ ಮಾಡಲಿದ್ದಾರೆ.

ಮಿಥುನ : ಮಕ್ಕಳ ಒತ್ತಾಯಕ್ಕೆ ಮಣಿದು ಹೊಸ ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯ ಸಂಜೆಯ ಬಳಿಕ ಹದಗೆಡಲಿದೆ. ಇದರಿಂದ ನೀವು ಆತಂಕಕ್ಕೆ ಒಳಗಾಗುವಿರಿ. ಹೊಸ ಉದ್ಯಮಕ್ಕೆ ಹೂಡಿಕೆ ಮಾಡುವವರಿಗೆ ಇದು ಶುಭದಿನವಾಗಿದೆ.

ಕಟಕ : ನಿಮ್ಮ ಉತ್ತಮ ಬುದ್ಧಿಯಿಂದಾಗಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಇಂದು ನಿಮಗೆ ಕುಟುಂಬದಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ. ಕೋರ್ಟ್ – ಕಚೇರಿ ವ್ಯವಹಾರಗಳಲ್ಲಿ ನಿಮಗೆ ಜಯವಿದೆ.

ಸಿಂಹ : ಕೃಷಿ ಚಟುವಟಿಕೆಗಳಲ್ಲಿ ಇರುವವರಿಗೆ ಇಂದು ತುಸು ಹೆಚ್ಚೇ ಖರ್ಚಾಗಬಹುದು. ಜವಳಿ ಉದ್ಯಮಿಗಳಿಗೆ ಉತ್ತಮ ಹಣಕಾಸಿನ ಲಾಭವಿದೆ. ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಭಾಗ್ಯವಿದೆ. ಕಲಾವಿದರಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ.

ಕನ್ಯಾ : ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿದೆ. ಹೀಗಾಗಿ ಆದಷ್ಟು ಮೌನವಾಗಿ ಇದ್ದಷ್ಟು ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ಪೋಷಕರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂಗಾತಿಯಿಂದ ನಿಮಗೆ ಉತ್ತಮ ಉಡುಗೊರೆ ಸಿಗಲಿದೆ.

 ತುಲಾ : ವೃತ್ತಿರಂಗದಲ್ಲಿ ನಿಮಗೆ ಯಶಸ್ಸಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಅವಕಾಶ ಹುಡುಕಿಕೊಂಡು ಬರಲಿದೆ. ವೈದ್ಯಕೀಯ ರಂಗದಲ್ಲಿ ಇರುವವರಿಗೆ ಇಂದು ಒತ್ತಡದ ದಿನವಾಗಿರಲಿದೆ. ಬಹಳ ದಿನಗಳಿಂದ ಉದ್ಯೋಗಕ್ಕೆ ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ.

ವೃಶ್ಚಿಕ : ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ಸ್ಥಾನ ಮಾನ ಸಿಗಲಿದೆ. ತಾಯಿಯ ಕಟುವಾದ ನುಡಿಯು ನಿಮ್ಮ ಮನಸ್ಸಿಗೆ ಘಾಸಿ ಉಂಟು ಮಾಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಲಿದ್ದಾರೆ.

ಧನು : ಹೊಸ ಕಚೇರಿಯ ವಾತಾವರಣಕ್ಕೆ ಹೊಂದಿಕೊಳ್ಳಲಿದ್ದೀರಿ. ಇಂದು ನಿಮಗೆ ಪ್ರಯಾಣ ಶುಭಕರವಾಗಿಲ್ಲ. ಹೀಗಾಗಿ ಆದಷ್ಟು ವಾಹನಗಳಿಂದ ದೂರವೇ ಇರಿ. ಕುಟುಂಬದಲ್ಲಿ ಶುಭ ವಾರ್ತೆ ಕೇಳುವಿರಿ.

 ಮಕರ : ಮಕ್ಕಳು ಓದಿನೆಡೆಗೆ ಹೆಚ್ಚಿನ ಆಸಕ್ತಿ ತೋರಲಿದ್ದಾರೆ. ಇದರಿಂದ ನೀವು ನಿರಾಳತೆ ಅನುಭವಿಸುವಿರಿ. ಇಂದು ನೀವು ಸಂಗಾತಿಯ ಜೊತೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ಕೃಷಿಕರಿಗೆ ಇದು ಲಾಭದ ದಿನವಾಗಿದೆ.

ಕುಂಭ : ಇಂದು ನಿಮ್ಮ ಅದೃಷ್ಟ ಖುಲಾಯಿಸಲಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಇಂದು ಪೂರ್ಣಗೊಳ್ಳಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಬೆಲೆಯನ್ನು ಪಡೆಯಲಿದ್ದೀರಿ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ.

ಮೀನ : ದಾಂಪತ್ಯ ಜೀವನದಲ್ಲಿ ಕಿರಿಕಿರಿ ಉಂಟಾಗಲಿದೆ. ಸಂಗಾತಿಯ ಮೇಲೆ ಅನುಮಾನ ಪಡುವುದು ಸೂಕ್ತವಲ್ಲ. ಎಲ್ಲರೊಂದಿಗೆ ಸ್ನೇಹ ಸಂಪಾದಿಸುವಲ್ಲಿ ಯಶಸ್ವಿಯಾಗುವಿರಿ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿದೆ. ಸಾರ್ವಜನಿಕ ಜೀವನದಲ್ಲಿ ಯಶಸ್ಸನ್ನು ಗಳಿಸುವಿರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...