alex Certify ಈ ರಾಶಿಯವರಿಗೆ ಇದೆ ಇಂದು ಆರ್ಥಿಕ ಸುಧಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗೆ ಇದೆ ಇಂದು ಆರ್ಥಿಕ ಸುಧಾರಣೆ

ಮೇಷ : ವಿನಾಕಾರಣ ನಿಂದನೆಗೆ ಒಳಗಾಗುವ ಸಾಧ್ಯತೆ ಇದೆ. ಇಂದು ನಿಮ್ಮ ಆರ್ಥಿಕ ಸ್ಥಿತಿಯು ಸುಧಾರಿಸಲಿದೆ. ಆದಷ್ಟು ಉಳಿತಾಯ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿ. ಇದರಿಂದ ಭವಿಷ್ಯದಲ್ಲಿ ನಿಮಗೆ ಒಳಿತಾಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರಲಿದೆ.

ವೃಷಭ : ಮನೆಯಲ್ಲಿ ಶಾಂತಿಯುತ ವಾತಾವರಣ ಇರಲಿದೆ. ಇದರಿಂದ ನೀವು ನಿರಾಳವಾಗಿ ಇರಲಿದ್ದೀರಿ. ಕಚೇರಿ ಕೆಲಸದಲ್ಲಿ ತೀರಾ ಗೊಂದಲಕ್ಕೆ ಒಳಗಾಗಬೇಡಿ. ಇದರಿಂದ ನಿಮ್ಮ ಆತ್ಮವಿಶ್ವಾಸ ಕುಗ್ಗಲಿದೆ. ಹಳೆಯ ಸಾಲಗಳನ್ನು ತೀರಿಸಲಿದ್ದೀರಿ.

ಮಿಥುನ : ಹಿರಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದು ನಿಮ್ಮನ್ನು ಚಿಂತೆಗೆ ದೂಡಲಿದೆ. ಕಚೇರಿ ಕೆಲಸದಲ್ಲಿ ನೆಮ್ಮದಿ ಇದೆ. ಗುರುವಿನ ಅನುಗ್ರಹದಿಂದ ವಿದ್ಯಾರ್ಥಿಗಳಿಗೆ ಅಂದುಕೊಂಡ ಕಾರ್ಯಗಳು ಈಡೇರಲಿದೆ.

ಕಟಕ : ಹಳೆಯ ಸಾಲಗಳೆಲ್ಲ ತೀರುವುದರಿಂದ ನೆಮ್ಮದಿಯಿಂದ ಇರಲಿದ್ದೀರಿ. ಇದು ಮಾತ್ರವಲ್ಲದೇ ಆರ್ಥಿಕವಾಗಿಯೂ ಸುಧಾರಣೆ ಕಂಡು ಬರಲಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಭಾಗ್ಯವಿದೆ. ಕೋಪದ ಕೈಗೆ ಬುದ್ಧಿ ಕೊಡಬೇಡಿ. ಇದರಿಂದ ನೀವೇ ತೊಂದರೆಗೆ ಒಳಗಾಗಲಿದ್ದೀರಿ.

ಸಿಂಹ : ಕಾರ್ಯಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಸಹಾಯದಿಂದ ಹಳೆಯ ಆಸ್ತಿ ವಾಜ್ಯಗಳ ಸಮಸ್ಯೆಯಿಂದ ಪಾರಾಗಲಿದ್ದೀರಿ. ಬೆಂಕಿಯಿಂದ ಅಂತರ ಕಾಯ್ದುಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಕುಟುಂಬಸ್ಥರ ಜೊತೆಯೇ ಮನಸ್ತಾಪ ಉಂಟಾಗಲಿದೆ.

ಕನ್ಯಾ : ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಕ್ಷುಲ್ಲಕ ಕಾರಣಕ್ಕೆ ತಂದೆಯೊಡನೆ ವಾಗ್ವಾದ ಉಂಟಾಗುವ ಸಾಧ್ಯತೆ ಇದೆ. ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ. ಜವಳಿ ಉದ್ಯಮಿಗಳಿಗೆ ಲಾಭವಿದೆ.

ತುಲಾ : ಅತಿ ವಿನಯಂ ದೂರ್ತ ಲಕ್ಷಣಂ ಎಂಬ ಗಾದೆ ಮಾತಿದೆ. ಈ ಮಾತನ್ನು ತಲೆಯಲ್ಲಿ ಇಟ್ಟುಕೊಂಡಿರಿ. ಮೇಲಾಧಿಕಾರಿಗಳ ವಿಶ್ವಾಸ ಗಳಿಸಿಕೊಳ್ಳುವ ಭರದಲ್ಲಿ ಕೆಲ ಭಾರವನ್ನೇ ಮೈಮೇಲೆ ಎಳೆದುಕೊಳ್ಳದಿರಿ. ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ.

ವೃಶ್ಚಿಕ : ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಇಲ್ಲವಾದಲ್ಲಿ ಸ್ನೇಹಿತರೇ ನಿಮಗೆ ಮೋಸ ಮಾಡುವ ಸಾಧ್ಯತೆ ಇದೆ. ವ್ಯವಹಾರ ಸಂಬಂಧ ಕೆಲ ಸಮಸ್ಯೆಗಳು ನಿಮ್ಮನ್ನು ಕಾಡಲಿದೆ. ಸಂಕಷ್ಟದ ನಡುವೆಯೂ ಶುಭ ಸುದ್ದಿಯನ್ನು ಕೇಳಲಿದ್ದೀರಿ.

ಧನು : ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ. ಇದರಿಂದ ಮುಂದಿನ ದಿನಗಳಲ್ಲಿ ಭಾರೀ ತಲೆದಂಡ ತೆರುವ ದಿನ ಬರಬಹುದು. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ.

ಮಕರ : ಹಿರಿಯರ ವ್ಯವಹಾರವನ್ನು ಮುಂದುವರಿಸುವ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ಮಾಡಲಿದ್ದೀರಿ. ಕಲಾವಿದರಿಗೆ ಇಂದು ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಕಡಿಮೆಯಾಗಿದೆ. ಉದ್ಯೋಗ ಸ್ಥಳ ಬದಲಾವಣೆ ಮಾಡಲಿದ್ದೀರಿ.

ಕುಂಭ : ಕಾರ್ಯಕ್ಷೇತ್ರದಲ್ಲಿ ಅತಿಯಾದ ಹೊರೆಯನ್ನು ಹೊರಬೇಡಿ. ಉದ್ಯಮಿಗಳು ಇಂದು ನಷ್ಟ ಅನುಭವಿಸಲಿದ್ದಾರೆ. ಆಸ್ತಿ ವ್ಯವಹಾರದಲ್ಲಿ ಮೋಸಕ್ಕೆ ಒಳಗಾಗುವಿರಿ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ. ಸಾಲಗಾರರು ಸರಿಯಾದ ಸಮಯಕ್ಕೆ ಬಾಕಿ ಹಣ ನೀಡಲಿದ್ದಾರೆ.

ಮೀನ : ಅಂದುಕೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗಲಿದೆ. ಹಳೆಯ ಸಾಲಗಳು ತೀರಲಿದೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಇದೆ. ಹಲವು ರೀತಿಯಲ್ಲಿ ಧನಾಗಮನವಿದೆ. ವ್ಯಾವಹಾರಿಕವಾಗಿ ಏಳ್ಗೆ ಇದೆ. ಶಾಂತ ರೀತಿಯಲ್ಲಿ ವರ್ತಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...