alex Certify ಈ ರಾಶಿಯವರಿಗೆ ಕಾದಿದೆ ಇಂದು ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗೆ ಕಾದಿದೆ ಇಂದು ಶುಭ ಸುದ್ದಿ

ಮೇಷ : ಈ ದಿನ ನಿಮ್ಮ ಪಾಲಿಗೆ ಮಿಶ್ರ ಫಲ ನೀಡಲಿದೆ. ರಾಜಕೀಯ ವ್ಯಕ್ತಿಗಳ ಮಾತು ಜನತೆಯ ಮೇಲೆ ಪ್ರಭಾವ ಬೀರಲಿದೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಜಯ ನಿಮ್ಮದಾಗಲಿದೆ. ಆರ್ಥಿಕ ಸ್ಥಿತಿ ಅಷ್ಟೊಂದು ಚೆನ್ನಾಗಿ ಇರಲಿಲ್ಲ.ಉದ್ಯಮದಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟವೇ ಕಾಣಲಿದೆ.

ವೃಷಭ : ಕೃಷಿಕರಿಗೆ ಹಾಗೂ ಜವಳಿ ಉದ್ಯಮಿಗಳಿಗೆ ಈ ದಿನವು ಹೆಚ್ಚು ಲಾಭಕರವಾಗಲಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ. ಬೆನ್ನು ನೋವಿನ ಸಮಸ್ಯೆ ನಿಮ್ಮನ್ನು ಕಾಡಲಿದೆ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ಸಾಧಿಸಲಿದ್ದಾರೆ.

ಮಿಥುನ : ಉದ್ಯಮದ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ನೂರು ಬಾರಿ ಯೋಚನೆ ಮಾಡಿ. ಅವಸರದಲ್ಲಿ ಯಾವುದೇ ಕಾರಣಕ್ಕೂ ಹೂಡಿಕೆ ಮಾಡಬೇಡಿ. ವ್ಯಾಪಾರದ ನಿಮಿತ್ತ ಪ್ರವಾಸ ಕೈಗೊಳ್ಳಲಿದ್ದೀರಿ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇದೆ.

ಕಟಕ : ಆಸ್ತಿ ವಿಚಾರದಲ್ಲಿ ಉಂಟಾದ ವಿವಾದವನ್ನು ನಿವಾರಣೆ ಮಾಡುವ ಸಲುವಾಗಿ ಪ್ರಭಾವಿ ವ್ಯಕ್ತಿಗಳ ಮೊರೆ ಹೋಗಲಿದ್ದೀರಿ. ಕಚೇರಿ ಕೆಲಸದಲ್ಲಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ.

ಸಿಂಹ : ಮನೆ ನವೀಕರಣ ಮಾಡುವ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದೀರಿ. ರಾಜಕೀಯ ವ್ಯಕ್ತಿಗಳ ಜನಪ್ರಿಯತೆ ಇನ್ನಷ್ಟು ಹೆಚ್ಚಲಿದೆ. ಹಣಕಾಸಿನ ವಿಚಾರದಲ್ಲಿ ನೆಮ್ಮದಿ ಇದೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿದೆ.

ಕನ್ಯಾ : ಮಿತ ಭಾಷಿಯಾದ ನೀವು ನಿಮ್ಮ ಈ ಗುಣದ ಮೂಲಕ ಸಾರ್ವಜನಿಕ ಜೀವನದಲ್ಲಿ ಮನ್ನಣೆ ಗಳಿಸಲಿದ್ದೀರಿ. ಎಲೆಕ್ಟ್ರಾನಿಕ್​ ಉದ್ಯಮಿಗಳಿಗೆ ಇಂದು ಅನಿರೀಕ್ಷಿತ ಲಾಭ ಕೂಡಿ ಬರಲಿದೆ. ಸಂಗಾತಿಯಿಂದ ನೀವು ಹೆಚ್ಚಿನ ಖರ್ಚನ್ನು ಭರಿಸಬೇಕಾಗಿ ಬರಬಹುದು. ಮಕ್ಕಳ ಸಾಧನೆಯಿಂದ ತೃಪ್ತಿ ಪಡುವಿರಿ.

ತುಲಾ : ಮಕ್ಕಳ ಒತ್ತಾಯಕ್ಕೆ ಮಣಿದು ಮನೆಯಲ್ಲಿ ವಾಹನ ಖರೀದಿ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಚುಚ್ಚು ಮಾತುಗಳು ನಿಮ್ಮ ನೆಮ್ಮದಿಯನ್ನು ಹಾಳು ಮಾಡಲಿದೆ. ರಾಜಕೀಯ ಗಣ್ಯ ವ್ಯಕ್ತಿಯನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮ್ಮ ಖ್ಯಾತಿ ಕೂಡ ಹೆಚ್ಚಲಿದೆ.

ವೃಶ್ಚಿಕ : ಮಕ್ಕಳು ಓದಿನ ಕಡೆಗೆ ಗಮನ ನೀಡದೇ ಇರೋದು ನಿಮ್ಮ ಚಿಂತೆಗೆ ಕಾರಣವಾಗಲಿದೆ. ಉದ್ಯೋಗಕ್ಕಾಗಿ ಅರಸುತ್ತಿರುವವರು ಇಂದು ಶುಭ ಸುದ್ದಿಯನ್ನು ಕೇಳಲಿದ್ದಾರೆ. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಮನೆಯ ಕಿರಿಯ ಸದಸ್ಯರಿಂದ ಶುಭ ಸುದ್ದಿ ಇದೆ.

ಧನು : ಅಗತ್ಯ ಇರುವವರಿಗೆ ಸರಿಯಾದ ಸಮಯಕ್ಕೆ ಸಹಾಯ ಮಾಡುವ ಮೂಲಕ ಮೆಚ್ಚುಗೆ ಗಳಿಸಲಿದ್ದೀರಿ. ಕಚೇರಿ ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ತಕ್ಕ ಲಾಭವನ್ನು ಪಡೆಯಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಕೂಡ ಕಡಿಮೆಯೇ. ನಿಮ್ಮಿಂದ ಸಹಾಯ ಪಡೆದವರು ಇಂದು ನಿಮ್ಮ ಮನೆಗೆ ಚೂರಿ ಇರಿಯಲಿದ್ದಾರೆ.

ಮಕರ : ಹೊಸ ಮನೆಯನ್ನು ನಿರ್ಮಾಣ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಆಸ್ತಿ ಖರೀದಿ ಮಾಡಲಿದ್ದೀರಿ. ಇದರಿಂದ ಮನೆಯಲ್ಲಿ ಸಂಭ್ರಮ ಇರಲಿದೆ.

ಕುಂಭ : ನಿಮ್ಮೆಲ್ಲ ಕಷ್ಟಗಳಿಗೆ ಸ್ನೇಹಿತರು ಹೆಗಲಾಗಲಿದ್ದಾರೆ. ಕಲಾವಿದರಿಗೆ ಉತ್ತಮ ಅವಕಾಶಗಳು ಕೂಡಿ ಬರಲಿದೆ. ವಿದ್ಯಾರ್ಥಿಗಳು ಓದಿನಲ್ಲಿ ಪ್ರಗತಿ ಸಾಧಿಸಲಿದ್ದಾರೆ. ಉದ್ಯಮಿಗಳು ಅದೃಷ್ಟದ ಮೇಲೆ ನಂಬಿಕೆ ಇಡಬೇಕು.

ಮೀನ : ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡುವ ಅವಕಾಶ ಕೂಡಿ ಬರಲಿದೆ. ಬೇರೆ ಮೂಲಗಳಿಂದ ಹಣ ಹರಿದು ಬರಲಿದೆ. ಸಾಲಗಾರರ ಕಾಟ ನಿಮ್ಮನ್ನು ಕಾಡಲಿದೆ. ವೃತ್ತಿ ಜೀವನದಲ್ಲಿ ಮಹತ್ತರ ಬದಲಾವಣೆ ಉಂಟಾಗಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...