alex Certify ಈ ರಾಶಿಯವರಿಗೆ ವೃತ್ತಿ ಜೀವನದಲ್ಲಿ ಸಿಗಲಿದೆ ಯಶಸ್ಸು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗೆ ವೃತ್ತಿ ಜೀವನದಲ್ಲಿ ಸಿಗಲಿದೆ ಯಶಸ್ಸು

 

ಮೇಷ : ಅಂದುಕೊಂಡ ಕಾರ್ಯಗಳು ನೆರವೇರಲಿದೆ. ಉದ್ಯಮದಲ್ಲಿ ನೀವು ಕೈಗೊಳ್ಳುವ ಸೂಕ್ತ ನಿರ್ಧಾರವು ನಿಮ್ಮನ್ನು ಉತ್ತುಂಗಕ್ಕೆ ಕರೆದೊಯ್ಯಲಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಕೈಗೊಂಡ ಪರಿಣಾಮ ದಣಿಯಲಿದ್ದೀರಿ.

ವೃಷಭ : ಅತಿಯಾದ ಖರ್ಚಿನಿಂದಾಗಿ ಸಂಪಾದಿಸಿದ ಹಣವೆಲ್ಲ ನೀರಿನಂತೆ ಪೋಲಾಗುತ್ತಿದೆ. ತಾಯಿಯು ನಿಮ್ಮ ಮನಸ್ಸಿಗೆ ನೋವಾಗುವಂತೆ ಮಾತನಾಡಲಿದ್ದಾರೆ. ಇದರಿಂದ ನೀವು ಅಪಾರ ನೊಂದುಕೊಳ್ಳುವಿರಿ. ಮನೆಯ ಹಿರಿಯರ ಆಶೀರ್ವಾದ ಸ್ಪೂರ್ತಿ ನೀಡಲಿದೆ.

ಮಿಥುನ : ಧಾರ್ಮಿಕ ಕಾರ್ಯಗಳತ್ತ ಒಲವು ಹೆಚ್ಚಲಿದೆ. ಸಾರ್ವಜನಿಕ ಸ್ಥಳದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡುವಿರಿ. ಖರ್ಚು ವೆಚ್ಚ ಹಿಡಿತದಲ್ಲಿ ಇರಲಿ. ಕಿರಿಯ ಪುತ್ರನ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ.

ಕಟಕ : ಮಕ್ಕಳು ಓದಿನ ಕಡೆಗೆ ಹೆಚ್ಚು ಲಕ್ಷ್ಯ ನೀಡೋದ್ರಿಂದ ಪೋಷಕರು ನೆಮ್ಮದಿಯಿಂದ ಇರಲಿದ್ದಾರೆ. ವಿದ್ಯಾರ್ಥಿಗಳು ವಿಶೇಷ ಯಶಸ್ಸನ್ನು ಹೊಂದಲಿದ್ದಾರೆ. ಸಂಗಾತಿಯು ನಿಮ್ಮೆಲ್ಲ ಕಾರ್ಯಗಳಿಗೆ ನೆರವು ನೀಡಲಿದ್ದಾರೆ.

ಸಿಂಹ : ವ್ಯವಹಾರದಲ್ಲಿ ತ್ವರಿತ ನಿರ್ಧಾರ ನಿಮಗೆ ನಷ್ಟಕ್ಕೆ ಕಾರಣವಾಗಬಹುದು. ಅಧಿಕಾರಗಳ ಕೃಪೆಯಿಂದ ನೀವು ಮಾಡಿದ ತಪ್ಪು ಮುಚ್ಚಿ ಹೋಗಲಿದೆ. ಕೆಟ್ಟ ಸ್ನೇಹಿತರ ಸಹವಾಸವನ್ನು ಬಿಟ್ಟು ಬಿಡಿ. ಮಗುವಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ತಂದೆಯ ಸಹಕಾರವು ಫಲಪ್ರದವಾಗುತ್ತದೆ.

ಕನ್ಯಾ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ. ಪೋಷಕರಿಂದ ಮಾರ್ಗದರ್ಶನ ಪಡೆದು ಉದ್ಯಮದಲ್ಲಿ ಬದಲಾವಣೆ ಮಾಡಲಿದ್ದೀರಿ.

ತುಲಾ : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಪತ್ನಿಯಿಂದ ಕೊಂಚ ಕಿರಿಕಿರಿ ಇರಲಿದೆ.

ವೃಶ್ಚಿಕ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಪದೇ ಪದೇ ಕೆಟ್ಟ ಕನಸು ಬೀಳುವುದರಿಂದ ಬೇಸತ್ತಿದ್ದೀರಾ. ಸೋಮವಾರದಂದು ಶಿವನಿಗೆ ರುದ್ರಾಭಿಷೇಕ ಮಾಡಿಸಿ. ಸಾರ್ವಜನಿಕ ಜೀವನದಲ್ಲಿ ಮೆಚ್ಚುಗೆ ಪಡೆಯುವಿರಿ.

ಧನು : ಕೋರ್ಟ್​ ಕಚೇರಿ ವ್ಯವಹಾರಗಳಲ್ಲಿ ನಿಮಗೆ ಮುನ್ನಡೆ ಇದೆ. ತಂದೆಯು ನಿಮ್ಮ ಪ್ರತಿ ಹೆಜ್ಜೆಯಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ಮಗುವಿನ ಆರೋಗ್ಯದಲ್ಲಿ ಏರುಪೇರಾಗಲಿದೆ. ಆದರೆ ಅತಿಯಾದ ಚಿಂತೆ ಬೇಡ. ಮನೆಮದ್ದಿನ ಮೂಲಕವೇ ಪರಿಹಾರವಿದೆ.

ಮಕರ : ಇಂದು ನೀವು ಆರ್ಥಿಕ ಲಾಭ ಹೊಂದಲಿದ್ದೀರಿ. ಆರೋಗ್ಯದಲ್ಲಿ ಏರುಪೇರು ಉಂಟಾದೀತು. ಹೊರಗಿನ ಆಹಾರ ಸೇವನೆ ಬೇಡ. ವೈವಾಹಿಕ ಸಂಬಂಧ ಕೂಡಿ ಬರಲಿದೆ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ.

ಕುಂಭ : ವ್ಯಾಪಾರದಲ್ಲಿ ಸಕಾಲಕ್ಕೆ ನೀವು ತೆಗೆದುಕೊಳ್ಳುವ ನಿರ್ಧಾರಗಳು ನಷ್ಟದಿಂದ ನಿಮ್ಮನ್ನು ಪಾರು ಮಾಡಲಿದೆ. ಅತಿಯಾದ ಮಸಾಲೆಯುಕ್ತ ಆಹಾರ ಸೇವನೆ ಬೇಡ. ಇದರಿಂದ ನಿಮ್ಮ ಆರೋಗ್ಯ ಹದಗೆಡಲಿದೆ.

ಮೀನ : ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಹಣವನ್ನು ಪಡೆಯಲಿದ್ದೀರಿ. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಮನೆ ನವೀಕರಣ ಕಾರ್ಯ ಮಾಡುವಿರಿ. ಗರ್ಭಿಣಿಯರಿಗೆ ಆರೋಗ್ಯದ ಮೇಲೆ ಕಾಳಜಿ ಇರಲಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...