alex Certify ಈ ರಾಶಿಯವರು ಮಾಡಲಿದ್ದಾರೆ ತಮ್ಮ ಕಾರ್ಯಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರು ಮಾಡಲಿದ್ದಾರೆ ತಮ್ಮ ಕಾರ್ಯಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ

ಮೇಷ : ಹಣದ ಸಂಪಾದನೆ ವಿಚಾರದಲ್ಲಿ ಹೊಸ ಮಾರ್ಗವೊಂದು ಸಿಗಲಿದೆ. ಸಾಲಗಾರರ ಕಾಟ ತಪ್ಪಿದ್ದಲ್ಲ. ಹೊಸ ವಾಹನ ಖರೀದಿ ಮಾಡಲಿದ್ದೀರಿ. ಜವಳಿ ಉದ್ಯಮಿಗಳಿಗೆ ದಿಢೀರ್​ ಲಾಭ ಕಾದಿದೆ.

ವೃಷಭ : ಸಹೋದರರ ಆರ್ಥಿಕ ಸಂಕಷ್ಟಕ್ಕೆ ನೀವು ನೆರವಾಗಲಿದ್ದೀರಿ. ಇದರಿಂದ ನಿಮ್ಮ ಪೋಷಕರು ನಿಮ್ಮ ಮೇಲೆ ಹೆಮ್ಮೆ ಪಡೆಲಿದ್ದಾರೆ. ಕುಟುಂಬಸ್ಥರ ಜೊತೆ ಕುಲದೇವರ ದರ್ಶನಕ್ಕೆ ತೆರಳಲಿದ್ದೀರಿ. ಇಂದು ಮನೆಯಲ್ಲಿ ನಿಮ್ಮ ವಿವಾಹ ಸಂಬಂಧದ ಬಗ್ಗೆ ಚರ್ಚಿಸಲಿದ್ದಾರೆ.

ಮಿಥುನ : ಆಸ್ತಿ ವಿಚಾರದಲ್ಲಿ ಮತ್ತಷ್ಟು ಗೋಜಲುಗಳು ಮುಂದುವರಿಯಲಿದೆ. ಮಕ್ಕಳು ನಿಮ್ಮ ಮೇಲೆ ಮುನಿಸಿಕೊಳ್ಳಲಿದ್ದಾರೆ. ಇದರಿಂದ ಇಡೀ ಮನೆಯ ನೆಮ್ಮದಿಯೇ ಹಾಳಾಗಲಿದೆ. ಹೂವು, ಹಣ್ಣು ವ್ಯಾಪಾರಿಗಳಿಗೆ ಇಂದು ಲಾಭವಿದೆ.

ಕಟಕ : ಈ ದಿನವನ್ನು ನೀವು ಸಂತೋಷದಿಂದ ಕಳೆಯಲಿದ್ದೀರಿ. ಪರಸ್ತ್ರೀಯರೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿದೆ. ಸಾರ್ವಜನಿಕ ಜೀವನದಲ್ಲಿ ನಿಮಗೆ ಮಾನಭಂಗವಾದೀತು. ಸುಬ್ರಹ್ಮಣ್ಯನನ್ನು ಆರಾಧಿಸಿ.

ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ. ಪೋಷಕರಿಂದ ಮಾರ್ಗದರ್ಶನ ಪಡೆದು ಉದ್ಯಮದಲ್ಲಿ ಬದಲಾವಣೆ ಮಾಡಲಿದ್ದೀರಿ.

ಕನ್ಯಾ : ಇಂದು ನಿಮ್ಮ ಮನಸ್ಸಿಗೆ ನೋವಾಗುವಂತಹ ಘಟನೆಯೊಂದು ಜರುಗಲಿದೆ. ಸ್ತ್ರೀಯರು ಇಂದು ಆರೋಗ್ಯದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕು. ವಿದ್ಯಾರ್ಥಿಗಳಿಗೆ ಅಂದುಕೊಂಡ ಕಾರ್ಯದಲ್ಲಿ ಜಯವಿದೆ.

ತುಲಾ: ಬಹಳ ದಿನಗಳ ಹಿಂದೆ ಕಳೆದುಕೊಂಡ ವಸ್ತುವೊಂದು ನಿಮಗೆ ವಾಪಸ್​ ಸಿಗಲಿದೆ. ದುರ್ಜನರ ಸಹವಾಸದಿಂದ ನಿಮ್ಮ ಹೆಸರು ಸಾರ್ವಜನಿಕ ವಲಯದಲ್ಲಿ ಕೆಡಲಿದೆ. ಬಹಳ ದಿನಗಳಿಂದ ವೈವಾಹಿಕ ಸಂಬಂಧಕ್ಕೆ ಹುಡುಕಾಡುತ್ತಿರುವ ನಿಮಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ.

ವೃಶ್ಚಿಕ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಪದೇ ಪದೇ ಕೆಟ್ಟ ಕನಸು ಬೀಳುವುದರಿಂದ ಬೇಸತ್ತಿದ್ದೀರಾ. ಸೋಮವಾರದಂದು ಶಿವನಿಗೆ ರುದ್ರಾಭಿಷೇಕ ಮಾಡಿಸಿ. ಸಾರ್ವಜನಿಕ ಜೀವನದಲ್ಲಿ ಮೆಚ್ಚುಗೆ ಪಡೆಯುವಿರಿ.

ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಪತ್ನಿಯಿಂದ ಕೊಂಚ ಕಿರಿಕಿರಿ ಇರಲಿದೆ.

ಮಕರ : ಸಹೋದರರಿಂದ ನಿಮಗೆ ಅನುಕೂಲ ಇರಲಿದೆ. ಮಕ್ಕಳ ಸಾಧನೆ ನಿಮ್ಮ ಕೀರ್ತಿಯನ್ನು ಹೆಚ್ಚಿಸಲಿದೆ. ಸ್ತ್ರೀಯರು ತಮ್ಮ ಕಾರ್ಯಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಲಿದ್ದಾರೆ. ಕಚೇರಿಯಲ್ಲಿ ಭಯದ ವಾತಾವರಣ ಇರಲಿದೆ.

ಕುಂಭ : ವಿದ್ಯಾರ್ಥಿಗಳಿಗೆ ಗುರುವಿನ ಅನುಗ್ರಹದಿಂದ ಎಲ್ಲವೂ ಒಳಿತಾಗಲಿದೆ. ನಿಮ್ಮ ಆಶೋತ್ತರಗಳು ಈಡೇರಬೇಕು ಅಂದರೆ ರುದ್ರಾಭಿಷೇಕ ಮಾಡಬೇಕು. ಗರ್ಭಿಣಿಯರು ಆರೋಗ್ಯದ ವಿಚಾರದಲ್ಲಿ ಜಾಗರೂಕರಾಗಿ ಇರಬೇಕು.

ಮೀನ : ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ನೀವು ಅಸಮಾಧಾನಗೊಳ್ಳಲಿದ್ದೀರಿ. ಕಚೇರಿಯಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಮುಂದುವರಿಯಲಿದೆ. ರಾಯರ ಆರಾಧನೆ ಮಾಡಿ. ಎಲ್ಲವೂ ಶುಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...