alex Certify ಈ ರಾಶಿಯವರು ಹೊಸ ಉದ್ಯಮಗಳಿಗೆ ಹೂಡಿಕೆ ಮಾಡಲು ಇಂದು ಶುಭ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರು ಹೊಸ ಉದ್ಯಮಗಳಿಗೆ ಹೂಡಿಕೆ ಮಾಡಲು ಇಂದು ಶುಭ ದಿನ

ಮೇಷ : ಕಚೇರಿಯಲ್ಲಿ ಇಂದು ಭಯದ ವಾತಾವರಣ ಇರಲಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹಿನ್ನಡೆ ಉಂಟಾಗಲಿದೆ.

ಮನೆಯಲ್ಲಿ ಹಿರಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಆಂಜನೇಯನನ್ನು ಪ್ರಾರ್ಥಿಸಿ.

ವೃಷಭ : ವ್ಯಾಪಾರ- ವ್ಯವಹಾರದಲ್ಲಿ ನೀವು ಲಾಭವನ್ನು ಹೊಂದಲಿದ್ದೀರಿ. ಕಚೇರಿಯಲ್ಲಿ ಭಯಪಟ್ಟು ಕೆಲಸ ಮಾಡುವಂತಹ ಸನ್ನಿವೇಶ ಎದುರಾಗಲಿದೆ. ಹತ್ತಿರದ ಸಂಬಂಧಿಗಳ ಭೇಟಿ ಮನಸ್ಸಿಗೆ ಖುಷಿ ಎನಿಸಲಿದೆ. ವಿದ್ಯಾರ್ಥಿಗಳಿಗೆ ದೈವಾನುಗ್ರಹ ಇರಲಿದೆ.

ಮಿಥುನ : ಜಾಗದ ವಿಚಾರಕ್ಕೆ ನೆರೆಮನೆಯವರ ಜೊತೆ ದೊಡ್ಡ ಗಲಾಟೆಯೇ ನಡೆಯಬಹುದು. ಯಾವುದೇ ಸಂದರ್ಭದಲ್ಲಿಯೂ ಮಾತಿನ ಮೇಲೆ ಹಿಡಿತವಿತಲಿ. ಇಂದು ನೀವು ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸಲಿದ್ದೀರಿ. ಕುಲದೇವರನ್ನು ಪ್ರಾರ್ಥಿಸಿ.

ಕಟಕ : ಪೂರ್ವಜರ ಆಸ್ತಿಯಿಂದ ನಿಮಗೆ ಲಾಭ ದೊರಕಿದೆ. ನಿಮ್ಮ ಜೀವನ ಸಂಗಾತಿಯಿಂದ ಧನಲಾಭ ಹೊಂದಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಭಾಗ್ಯವಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಸ್ಥಿರತೆಯನ್ನು ಕಾಣಲಿದ್ದೀರಿ.

ಸಿಂಹ : ಅನಾರೋಗ್ಯದಿಂದ ಬಳಲುತ್ತಿದ್ದವರು ಇಂದು ಚೇತರಿಕೆ ಕಾಣಲಿದ್ದಾರೆ. ಸಹೋದರಿಯು ನಿಮಗೆ ಇಂದು ಉಡುಗೊರೆ ನೀಡಲಿದ್ದಾರೆ. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಒಲವು ತೋರಲಿದ್ದೀರಿ. ಅನಗತ್ಯ ಖರ್ಚು ವೆಚ್ಚಗಳ ಮೇಲೆ ಹಿಡಿತ ಇರಲಿ.

ಕನ್ಯಾ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ. ಪೋಷಕರಿಂದ ಮಾರ್ಗದರ್ಶನ ಪಡೆದು ಉದ್ಯಮದಲ್ಲಿ ಬದಲಾವಣೆ ಮಾಡಲಿದ್ದೀರಿ.

ತುಲಾ : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಪತ್ನಿಯಿಂದ ಕೊಂಚ ಕಿರಿಕಿರಿ ಇರಲಿದೆ.

ವೃಶ್ಚಿಕ : ಇಂದು ನೀವು ಯಾರಿಗೂ ಸಾಲ ನೀಡಲು ಹೋಗಬೇಡಿ. ಇವತ್ತು ನೀಡಿದ ಹಣ ಎಂದಿಗೂ ವಾಪಸ್​ ಬರೋದಿಲ್ಲ. ವಿದ್ಯಾರ್ಥಿಗಳು ಆದಷ್ಟು ಎಚ್ಚರವಾಗಿ ಇರಿ. ಸಂಗಾತಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ನೆರವಾಗಲಿದ್ದಾರೆ. ಶಿವನನ್ನು ಆರಾಧಿಸಿ.

ಧನು: ಉದ್ಯೋಗ ಸಿಗದೇ ಅಲೆದಾಡುತ್ತಿದ್ದ ನಿಮಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ಇಂದು ನೀವು ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಕುಟುಂಬಸ್ಥರ ಜೊತೆ ವಾಗ್ವಾದ ಉಂಟಾಗಬಹುದು. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಲಿದ್ದೀರಿ.

ಮಕರ : ಆಧ್ಮಾತ್ಮಿಕ ಕ್ಷೇತ್ರದತ್ತ ಒಲವು ತೋರಲಿದ್ದೀರಿ. ಸಂಗಾತಿಯು ಇಂದು ಅದೃಷ್ಟದಿಂದ ಧನಲಾಭ ಪಡೆಯಲಿದ್ದಾರೆ. ಉದ್ಯಮದಲ್ಲಿ ಸಂಗಾತಿ ಸಾಧಿಸುತ್ತಿರುವ ಯಶಸ್ಸು ನಿಮಗೆ ಸಂತೋಷ ನೀಡಲಿದೆ. ಪೋಷಕರ ಆರೋಗ್ಯದ ಬಗ್ಗೆ ಆದಷ್ಟು ಜಾಗ್ರತೆ ಇರಲಿ.

ಕುಂಭ : ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಮೂಡಿದ್ದ ವೈಮನಸ್ಯ ದೂರಾಗಲಿದೆ. ಸ್ತ್ರೀಯರಿಗೆ ಧನಲಾಭವಿದೆ. ದುಬಾರಿ ಬೆಲೆಯ ವಸ್ತು ಖರೀದಿ ಮಾಡಲಿದ್ದೀರಿ. ಕಣ್ಣಿನ ಆರೋಗ್ಯ ಕೆಡಲಿದೆ. ವ್ಯಾಪಾರಿಗಳಿಗೆ ಶುಭವಿದೆ.

ಮೀನ : ಕಚೇರಿಯಲ್ಲಿ ನಿಮ್ಮ ಕೆಲಸವು ಮೇಲಾಧಿಕಾರಿಗಳಿಗೆ ಮೆಚ್ಚುಗೆ ಎನಿಸಲಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ಹೊಸ ಉದ್ಯಮಗಳಿಗೆ ಹೂಡಿಕೆ ಮಾಡಲು ಬಯಸುವವರಿಗೆ ಇದು ಶುಭದಿನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...