alex Certify ಈ ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ

ಮೇಷ : ಈ ದಿನ ನಿಮ್ಮ ಪಾಲಿಗೆ ಶುಭಕಾರಿಯಾಗಿದೆ. ಜವಳಿ ಉದ್ಯಮಿಗಳು, ಹಣ್ಣು ವ್ಯಾಪಾರಿಗಳು, ಎಲೆಕ್ಟ್ರಾನಿಕ್​​ ವಸ್ತು ಮಾರಾಟಗಾರರು ಇಂದು ಅನಿರೀಕ್ಷಿತ ಲಾಭವನ್ನು ಪಡೆಯಲಿದ್ದಾರೆ. ಇಂದು ನೀವು ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ.

ವೃಷಭ : ಆಸ್ತಿ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಏರ್ಪಡುವ ಸಾಧ್ಯತೆ ಇದೆ. ಬಹಳ ದಿನಗಳ ಬಳಿಕ ನೀವಿಂದು ಸ್ನೇಹಿತರನ್ನು ಭೇಟಿ ಮಾಡಲಿದ್ದೀರಿ. ಕೋರ್ಟ್ ಕಚೇರಿ ವಿಚಾರದಲ್ಲಿ ನಿಮಗೆ ಮುನ್ನಡೆ ಕಾದಿದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ.

ಮಿಥುನ : ಹೊಸ ಕೆಲಸವೊಂದನ್ನು ಇಂದಿನಿಂದ ಆರಂಭಿಸಲಿದ್ದೀರಿ. ಕೋರ್ಟ್​ ಕಚೇರಿ ಜಂಜಾಟಗಳಿಂದ ಮುಕ್ತಿ ಪಡೆಯಲಿದ್ದೀರಿ. ವೈವಾಹಿಕ ಸಂಬಂಧಕ್ಕಾಗಿ ಅರಸುತ್ತಿರುವ ನಿಮಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಕಲಾವಿದರಿಗೆ ಶುಭವಿದೆ.

ಕಟಕ : ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುವ ಬಗ್ಗೆ ಚರ್ಚೆ ನಡೆಸಲಿದ್ದೀರಿ. ಪರಿಸ್ಥಿತಿಯ ಸುಳಿಗೆ ಸಿಕ್ಕು ಕೆಲ ಕಠಿಣ ನಿರ್ಧಾರ ಕೈಗೊಳ್ಳಬೇಕಾಗಿ ಬರಬಹುದು. ಮಕ್ಕಳ ಆರೋಗ್ಯದ ವಿಚಾರವಾಗಿ ಜಾಗ್ರತೆ ವಹಿಸಿ. ಕಚೇರಿಯಲ್ಲಿ ಒತ್ತಡ ಹೆಚ್ಚಲಿದೆ.

ಸಿಂಹ : ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ನಿಮ್ಮದಾಗಲಿದೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಮನೆಯಲ್ಲಿ ಕಲಹ ಏರ್ಪಡಲಿದೆ. ಅನಿರೀಕ್ಷಿತ ಅತಿಥಿ ಇಂದು ನಿಮ್ಮ ಮನೆಗೆ ಆಗಮಿಸಲಿದ್ದಾರೆ. ಹೊಸ ಯೋಜನೆ ಆರಂಭಿಸಲಿದ್ದೀರಿ.

ಕನ್ಯಾ : ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಸೂಕ್ತ ಬೆಲೆ ದೊರಕಲಿದೆ. ಕಚೇರಿ ಕೆಲಸದ ನಿಮಿತ್ತ ಪ್ರವಾಸಿ ತಾಣಗಳಿಗೆ ತೆರಳಲಿದ್ದೀರಿ. ಮಕ್ಕಳು ಓದಿನಲ್ಲಿ ಆಸಕ್ತಿ ಕಳೆದುಕೊಳ್ಳಲಿದ್ದಾರೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಪಡೆಯಲಿದ್ದೀರಿ.

ತುಲಾ : ವ್ಯಾಪಾರ – ವ್ಯವಹಾರದಲ್ಲಿ ನೀವು ಲಾಭವನ್ನು ಹೊಂದಲಿದ್ದೀರಿ. ಕಚೇರಿಯಲ್ಲಿ ಭಯಪಟ್ಟು ಕೆಲಸ ಮಾಡುವಂತಹ ಸನ್ನಿವೇಶ ಎದುರಾಗಲಿದೆ. ಹತ್ತಿರದ ಸಂಬಂಧಿಗಳ ಭೇಟಿ ಮನಸ್ಸಿಗೆ ಖುಷಿ ಎನಿಸಲಿದೆ. ವಿದ್ಯಾರ್ಥಿಗಳಿಗೆ ದೈವಾನುಗ್ರಹ ಇರಲಿದೆ.

ವೃಶ್ಚಿಕ : ಪೂರ್ವಜರ ಆಸ್ತಿಯಿಂದ ನಿಮಗೆ ಲಾಭ ದೊರಕಿದೆ. ನಿಮ್ಮ ಜೀವನ ಸಂಗಾತಿಯಿಂದ ಧನಲಾಭ ಹೊಂದಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಭಾಗ್ಯವಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಸ್ಥಿರತೆಯನ್ನು ಕಾಣಲಿದ್ದೀರಿ.

ಧನು : ಜಾಗದ ವಿಚಾರಕ್ಕೆ ನೆರೆಮನೆಯವರ ಜೊತೆ ದೊಡ್ಡ ಗಲಾಟೆಯೇ ನಡೆಯಬಹುದು. ಯಾವುದೇ ಸಂದರ್ಭದಲ್ಲಿಯೂ ಮಾತಿನ ಮೇಲೆ ಹಿಡಿತವಿತಲಿ. ಇಂದು ನೀವು ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸಲಿದ್ದೀರಿ. ಕುಲದೇವರನ್ನು ಪ್ರಾರ್ಥಿಸಿ.

ಮಕರ : ಅನಾರೋಗ್ಯದಲ್ಲಿ ಬಳಲುತ್ತಿದ್ದವರು ಇಂದು ಚೇತರಿಕೆ ಕಾಣಲಿದ್ದಾರೆ. ಸಹೋದರಿಯು ನಿಮಗೆ ಇಂದು ಉಡುಗೊರೆ ನೀಡಲಿದ್ದಾರೆ. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಒಲವು ತೋರಲಿದ್ದೀರಿ. ಅನಗತ್ಯ ಖರ್ಚು ವೆಚ್ಚಗಳ ಮೇಲೆ ಹಿಡಿತ ಇರಲಿ.

ಕುಂಭ : ಆದಾಯಕ್ಕಿಂತ ಹೆಚ್ಚಿನ ಖರ್ಚಿನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಲಿದ್ದೀರಿ. ಸಾಲಗಾರರು ಮನೆ ಬಾಗಿಲಿಗೆ ಬರಲಿದ್ದಾರೆ. ಶಿವನನ್ನು ಆರಾಧಿಸಿ. ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ.

ಮೀನ : ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ಹಣ ಸಂಪಾದನೆಗೆ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳಲಿದ್ದೀರಿ. ಕಚೇರಿಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯಲಿದೆ. ಶಿಕ್ಷಕರಿಗೆ ಉತ್ತಮ ಅವಕಾಶ ಕಾದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...